<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ಕೋಮು ಕಲಹ ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಅವರು, 'ಹೈದರಾಬಾದ್ ಮೂಲದ ಪಕ್ಷವೊಂದು ಪಶ್ಚಿಮ ಬಂಗಾಳದಲ್ಲಿ ಮತಗಳನ್ನು ಧ್ರುವೀಕರಣ ಮಾಡಲು ಹೊರಟಿದೆ. ಮುಸ್ಲಿಂ ಸಹೋದರರು ಈ ಬಗ್ಗೆ ಎಚ್ಚರದಿಂದ ಇರಬೇಕಿದೆ' ಎಂದು ಅಸಾದುದ್ದೀನ್ ಓವೈಸಿ ನೇತೃತ್ವದ ಎಐಐಎಂಐಎಂ ಪಕ್ಷದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.</p>.<p>ಕೋಮು ಸಂಘರ್ಷಗಳನ್ನು ಪ್ರಚೋದಿಸುವ ಬಿಜೆಪಿಯ ಪ್ರಯತ್ನಗಳ ವಿರುದ್ಧ ಹಿಂದೂಗಳು ಒಂದಾಗಬೇಕು ಎಂದು ಮಮತಾ ಕರೆ ನೀಡಿದ್ದಾರೆ.</p>.<p>'ಚುನಾವಣೆಯಲ್ಲಿ ಜಯ ಸಾಧಿಸುವುದಕ್ಕೋಸ್ಕರ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಕೋಮು ಕಲಹಗಳನ್ನು ಹುಟ್ಟುಹಾಕಲು ಯತ್ನಿಸುತ್ತಿದೆ' ಎಂದು ಇದೇ ವೇಳೆ ಅವರು ಆರೋಪಿಸಿದ್ದಾರೆ.<br /><br />'ಪ್ರತಿದಿನ ಮನೆಯಿಂದ ಹೊರಡುವ ಮೊದಲು ಚಂಡಿ ಮಂತ್ರವನ್ನು ಪಠಿಸುವ ನಾನು ಧರ್ಮನಿಷ್ಠ ಹಿಂದೂವಾಗಿದ್ದೇನೆ. ಆದರೆ, ಪ್ರತಿ ಧರ್ಮಕ್ಕೂ ಗೌರವ ನೀಡುವ ಸಂಪ್ರದಾಯದಲ್ಲಿ ನನಗೆ ನಂಬಿಕೆ ಇದೆ' ಎಂದು ಮಮತಾ ಹೇಳಿದ್ದಾರೆ.</p>.<p>ಬಿಜೆಪಿ ನಾಯಕರ ದಲಿತ ಮನೆಗಳ ಭೇಟಿ ವಿರುದ್ಧ ಹರಿಹಾಯ್ದಿರುವ ಅವರು, 'ನಾನೊಬ್ಬ ಬ್ರಾಹ್ಮಣ ಮಹಿಳೆ. ಆದರೆ, ನನ್ನ ಎಲ್ಲ ವೈಯಕ್ತಿಕ ಅಗತ್ಯಗಳನ್ನು ನೋಡಿಕೊಳ್ಳುವುದು ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ. ಅವಳು ನನಗೆ ಆಹಾರವನ್ನು ಸಹ ತಯಾರು ಮಾಡುತ್ತಾಳೆ' ಎಂದು ಹೇಳಿದ್ದಾರೆ.</p>.<p>'ದಲಿತರ ಮನೆಯ ಅಂಗಳದಲ್ಲಿ ಕುಳಿತು ತಿನ್ನಲು ಪಂಚತಾರಾ ಹೋಟೆಲ್ಗಳಿಂದ ಊಟ ತರುವವರು ದಲಿತ ವಿರೋಧಿಗಳು. ಅವರು ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತರ ವಿರೋಧಿಗಳಾಗಿರುವುದರಿಂದ ನಾನು ಇದನ್ನು ಒತ್ತಿ ಹೇಳಬೇಕಾಗಿಲ್ಲ' ಎಂದು ಬಿಜೆಪಿ ಮುಖಂಡರ ವಿರುದ್ಧ ಮಮತಾ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ಕೋಮು ಕಲಹ ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಅವರು, 'ಹೈದರಾಬಾದ್ ಮೂಲದ ಪಕ್ಷವೊಂದು ಪಶ್ಚಿಮ ಬಂಗಾಳದಲ್ಲಿ ಮತಗಳನ್ನು ಧ್ರುವೀಕರಣ ಮಾಡಲು ಹೊರಟಿದೆ. ಮುಸ್ಲಿಂ ಸಹೋದರರು ಈ ಬಗ್ಗೆ ಎಚ್ಚರದಿಂದ ಇರಬೇಕಿದೆ' ಎಂದು ಅಸಾದುದ್ದೀನ್ ಓವೈಸಿ ನೇತೃತ್ವದ ಎಐಐಎಂಐಎಂ ಪಕ್ಷದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.</p>.<p>ಕೋಮು ಸಂಘರ್ಷಗಳನ್ನು ಪ್ರಚೋದಿಸುವ ಬಿಜೆಪಿಯ ಪ್ರಯತ್ನಗಳ ವಿರುದ್ಧ ಹಿಂದೂಗಳು ಒಂದಾಗಬೇಕು ಎಂದು ಮಮತಾ ಕರೆ ನೀಡಿದ್ದಾರೆ.</p>.<p>'ಚುನಾವಣೆಯಲ್ಲಿ ಜಯ ಸಾಧಿಸುವುದಕ್ಕೋಸ್ಕರ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಕೋಮು ಕಲಹಗಳನ್ನು ಹುಟ್ಟುಹಾಕಲು ಯತ್ನಿಸುತ್ತಿದೆ' ಎಂದು ಇದೇ ವೇಳೆ ಅವರು ಆರೋಪಿಸಿದ್ದಾರೆ.<br /><br />'ಪ್ರತಿದಿನ ಮನೆಯಿಂದ ಹೊರಡುವ ಮೊದಲು ಚಂಡಿ ಮಂತ್ರವನ್ನು ಪಠಿಸುವ ನಾನು ಧರ್ಮನಿಷ್ಠ ಹಿಂದೂವಾಗಿದ್ದೇನೆ. ಆದರೆ, ಪ್ರತಿ ಧರ್ಮಕ್ಕೂ ಗೌರವ ನೀಡುವ ಸಂಪ್ರದಾಯದಲ್ಲಿ ನನಗೆ ನಂಬಿಕೆ ಇದೆ' ಎಂದು ಮಮತಾ ಹೇಳಿದ್ದಾರೆ.</p>.<p>ಬಿಜೆಪಿ ನಾಯಕರ ದಲಿತ ಮನೆಗಳ ಭೇಟಿ ವಿರುದ್ಧ ಹರಿಹಾಯ್ದಿರುವ ಅವರು, 'ನಾನೊಬ್ಬ ಬ್ರಾಹ್ಮಣ ಮಹಿಳೆ. ಆದರೆ, ನನ್ನ ಎಲ್ಲ ವೈಯಕ್ತಿಕ ಅಗತ್ಯಗಳನ್ನು ನೋಡಿಕೊಳ್ಳುವುದು ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ. ಅವಳು ನನಗೆ ಆಹಾರವನ್ನು ಸಹ ತಯಾರು ಮಾಡುತ್ತಾಳೆ' ಎಂದು ಹೇಳಿದ್ದಾರೆ.</p>.<p>'ದಲಿತರ ಮನೆಯ ಅಂಗಳದಲ್ಲಿ ಕುಳಿತು ತಿನ್ನಲು ಪಂಚತಾರಾ ಹೋಟೆಲ್ಗಳಿಂದ ಊಟ ತರುವವರು ದಲಿತ ವಿರೋಧಿಗಳು. ಅವರು ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತರ ವಿರೋಧಿಗಳಾಗಿರುವುದರಿಂದ ನಾನು ಇದನ್ನು ಒತ್ತಿ ಹೇಳಬೇಕಾಗಿಲ್ಲ' ಎಂದು ಬಿಜೆಪಿ ಮುಖಂಡರ ವಿರುದ್ಧ ಮಮತಾ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>