ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಬಿರ್ಭೂಮ್ನಲ್ಲಿ ಟಿಎಂಸಿ ಗೂಂಡಾಗಳಿಂದ ಅಮಾಯಕರ ಸಜೀವ ದಹನ ಮಾಡಲಾಯಿತು. ಬಿಜೆಪಿ ಶಾಸಕರ ಮೇಲೆ ಅಶಿಸ್ತಿನ ಟಿಎಂಸಿ ಶಾಸಕರು ಹಲ್ಲೆ ಮಾಡಿ ಹಿಂಸಾಚಾರ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ ಎಂದು ಟಿಎಂಸಿ ಶಾಸಕರು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಕುರಿತು ಅಲ್ಲಿನ ಸಿಎಂ ಮಮತಾ ಬ್ಯಾನರ್ಜಿ ಅವರು ಏನು ಮಾಡುತ್ತಾರೋ ಕಾದುನೋಡಬೇಕು’ ಎಂದು ವಾಗ್ದಾಳಿ ನಡೆಸಿದ್ದಾರೆ.