<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ವಿಷ್ಣುಪುರದ ಬಿಜೆಪಿಯ ಮಾಜಿ ಶಾಸಕ ತನ್ಮಯ್ ಘೋಷ್ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಗೊಂಡಿದ್ದಾರೆ.</p>.<p>ಈ ಕುರಿತು ಸುದ್ದಿಸಂಸ್ಥೆ ಎಎನ್ಐ ಜೊತೆ ಮಾತನಾಡಿರುವ ಅವರು, 'ಬಿಜೆಪಿಯು ಸೇಡಿನ ರಾಜಕೀಯದಲ್ಲಿ ತೊಡಗಿದೆ. ಅವರು(ಬಿಜೆಪಿ) ಕೇಂದ್ರದ ಏಜೆನ್ಸಿಗಳನ್ನು ಬಳಸಿ ಜನರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸುವಂತೆ ನಾನು ಎಲ್ಲ ರಾಜಕಾರಣಿಗಳಲ್ಲಿ ಕೇಳಿಕೊಳ್ಳುತ್ತೇನೆ' ಎಂದು ಹೇಳಿದ್ದಾರೆ.</p>.<p>ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ 292 ಸ್ಥಾನಗಳ ಪೈಕಿ ಟಿಎಂಸಿ 212 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ಮಮತಾ ಸತತ 3ನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದರು. 77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ಪ್ರಮುಖ ವಿರೋಧ ಪಕ್ಷವಾಗಿ ರೂಪುಗೊಂಡಿತ್ತು.</p>.<p>ಮಮತಾ ಬ್ಯಾನರ್ಜಿ ಅವರು ಮತ್ತೆ ಸಿಎಂ ಆದ ನಂತರ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಮತ್ತು ಅವರ ಪುತ್ರ ಸುಭ್ರಾಘ್ಷು ರಾಯ್ ಅವರು ಎರಡು ತಿಂಗಳ ಹಿಂದೆ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ಗೆ (ಟಿಎಂಸಿ) ಸೇರ್ಪಡೆಯಾಗಿದ್ದರು.</p>.<p>ಉತ್ತರ ಬಂಗಾಳದಲ್ಲಿ ಪಕ್ಷದ ಸಂಘಟನಾ ಚತುರ ಎನಿಸಿಕೊಂಡಿದ್ದ ಅಲಿಪುರದೂರ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಂಗಾ ಪ್ರಸಾದ್ ಶರ್ಮಾ ಅವರು ಜೂನ್ನಲ್ಲಿ ಬಿಜೆಪಿ ತೊರೆದು ಟಿಎಂಸಿ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ವಿಷ್ಣುಪುರದ ಬಿಜೆಪಿಯ ಮಾಜಿ ಶಾಸಕ ತನ್ಮಯ್ ಘೋಷ್ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಗೊಂಡಿದ್ದಾರೆ.</p>.<p>ಈ ಕುರಿತು ಸುದ್ದಿಸಂಸ್ಥೆ ಎಎನ್ಐ ಜೊತೆ ಮಾತನಾಡಿರುವ ಅವರು, 'ಬಿಜೆಪಿಯು ಸೇಡಿನ ರಾಜಕೀಯದಲ್ಲಿ ತೊಡಗಿದೆ. ಅವರು(ಬಿಜೆಪಿ) ಕೇಂದ್ರದ ಏಜೆನ್ಸಿಗಳನ್ನು ಬಳಸಿ ಜನರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸುವಂತೆ ನಾನು ಎಲ್ಲ ರಾಜಕಾರಣಿಗಳಲ್ಲಿ ಕೇಳಿಕೊಳ್ಳುತ್ತೇನೆ' ಎಂದು ಹೇಳಿದ್ದಾರೆ.</p>.<p>ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ 292 ಸ್ಥಾನಗಳ ಪೈಕಿ ಟಿಎಂಸಿ 212 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ಮಮತಾ ಸತತ 3ನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದರು. 77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ಪ್ರಮುಖ ವಿರೋಧ ಪಕ್ಷವಾಗಿ ರೂಪುಗೊಂಡಿತ್ತು.</p>.<p>ಮಮತಾ ಬ್ಯಾನರ್ಜಿ ಅವರು ಮತ್ತೆ ಸಿಎಂ ಆದ ನಂತರ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಮತ್ತು ಅವರ ಪುತ್ರ ಸುಭ್ರಾಘ್ಷು ರಾಯ್ ಅವರು ಎರಡು ತಿಂಗಳ ಹಿಂದೆ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ಗೆ (ಟಿಎಂಸಿ) ಸೇರ್ಪಡೆಯಾಗಿದ್ದರು.</p>.<p>ಉತ್ತರ ಬಂಗಾಳದಲ್ಲಿ ಪಕ್ಷದ ಸಂಘಟನಾ ಚತುರ ಎನಿಸಿಕೊಂಡಿದ್ದ ಅಲಿಪುರದೂರ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಂಗಾ ಪ್ರಸಾದ್ ಶರ್ಮಾ ಅವರು ಜೂನ್ನಲ್ಲಿ ಬಿಜೆಪಿ ತೊರೆದು ಟಿಎಂಸಿ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>