<p><strong>ಕೋಲ್ಕತ್ತ (ಪ.ಬಂಗಾಳ):</strong> ಉತ್ತರ ಕೋಲ್ಕತ್ತದ ಬಿಜೆಪಿ ಜಿಲ್ಲಾಧ್ಯಕ್ಷ ಶಿಬಾಜಿ ಸಿಂಘಾ ರಾಯ್ ಮೇಲೆ ಬುಧವಾರ ಹಲ್ಲೆ ನಡೆದಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.</p>.<p>ಗಾಯಗೊಂಡಿರುವ ಶಿಬಾಜಿ ಸಿಂಘಾ ರಾಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಸುವೆಂದು ಅಧಿಕಾರಿ ಹಾಗೂ ಶಂಕುದೇಬ್ ಪಾಂಡಾ ವಿರುದ್ಧವೂ ದಾಳಿ ನಡೆದಿದೆ ಎಂದು ವರದಿಯಾಗಿದೆ.</p>.<p>ಏತನ್ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಇಲ್ಲದಾಗಿದೆ ಎಂದು ಲೋಕಸಭಾ ಸಂಸದ ಡಾ. ಸುಕಂತ ಮಜುಂದಾರ್ ಆರೋಪಿಸಿದರು.</p>.<p>ಫೂಲ್ಭಾಗನ್ ಬಳಿ ಟಿಎಂಸಿ ಗೂಂಡಾಗಳು ಬಿಜೆಪಿ ನಾಯಕರ ಮೇಲೆ ಮತ್ತೊಂದು ದಾಳಿ ನಡೆಸಿದ್ದಾರೆ. ಈ ಬಾರಿ ಸುವೆಂದು ಅಧಿಕಾರಿ, ಶಂಕುದೇಬ್ ಹಾಗೂ ಶಿಬಾಜಿ ಸಿಂಘಾ ರಾಯ್ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದೆಗೆಟ್ಟಿದೆ ಎಂದು ಮಂಜುದಾರ್ ಆರೋಪ ಮಾಡಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/west-bengal-tmc-minister-injured-in-bomb-attack-in-railway-station-806410.html" itemprop="url">ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಚಿವರ ಮೇಲೆ ಬಾಂಬ್ ದಾಳಿ; ಗಾಯ </a></p>.<p>ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ವ್ಯಾಪಕವಾಗಿ ರಾಜಕೀಯ ಅಹಿತಕರ ಘಟನೆಗಳು ನಡೆಯುತ್ತಿದೆ. ಈ ಮುನ್ನ ಪಶ್ಚಿಮ ಬಂಗಾಳದ ಕಾರ್ಮಿಕ ಸಚಿವ ಜಾಕೀರ್ ಹೊಸೈನ್ ಮೇಲೆ ಕಚ್ಚಾ ಬಾಂಬ್ ದಾಳಿ ನಡೆದಿತ್ತು. ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ (ಪ.ಬಂಗಾಳ):</strong> ಉತ್ತರ ಕೋಲ್ಕತ್ತದ ಬಿಜೆಪಿ ಜಿಲ್ಲಾಧ್ಯಕ್ಷ ಶಿಬಾಜಿ ಸಿಂಘಾ ರಾಯ್ ಮೇಲೆ ಬುಧವಾರ ಹಲ್ಲೆ ನಡೆದಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.</p>.<p>ಗಾಯಗೊಂಡಿರುವ ಶಿಬಾಜಿ ಸಿಂಘಾ ರಾಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಸುವೆಂದು ಅಧಿಕಾರಿ ಹಾಗೂ ಶಂಕುದೇಬ್ ಪಾಂಡಾ ವಿರುದ್ಧವೂ ದಾಳಿ ನಡೆದಿದೆ ಎಂದು ವರದಿಯಾಗಿದೆ.</p>.<p>ಏತನ್ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಇಲ್ಲದಾಗಿದೆ ಎಂದು ಲೋಕಸಭಾ ಸಂಸದ ಡಾ. ಸುಕಂತ ಮಜುಂದಾರ್ ಆರೋಪಿಸಿದರು.</p>.<p>ಫೂಲ್ಭಾಗನ್ ಬಳಿ ಟಿಎಂಸಿ ಗೂಂಡಾಗಳು ಬಿಜೆಪಿ ನಾಯಕರ ಮೇಲೆ ಮತ್ತೊಂದು ದಾಳಿ ನಡೆಸಿದ್ದಾರೆ. ಈ ಬಾರಿ ಸುವೆಂದು ಅಧಿಕಾರಿ, ಶಂಕುದೇಬ್ ಹಾಗೂ ಶಿಬಾಜಿ ಸಿಂಘಾ ರಾಯ್ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದೆಗೆಟ್ಟಿದೆ ಎಂದು ಮಂಜುದಾರ್ ಆರೋಪ ಮಾಡಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/west-bengal-tmc-minister-injured-in-bomb-attack-in-railway-station-806410.html" itemprop="url">ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಚಿವರ ಮೇಲೆ ಬಾಂಬ್ ದಾಳಿ; ಗಾಯ </a></p>.<p>ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ವ್ಯಾಪಕವಾಗಿ ರಾಜಕೀಯ ಅಹಿತಕರ ಘಟನೆಗಳು ನಡೆಯುತ್ತಿದೆ. ಈ ಮುನ್ನ ಪಶ್ಚಿಮ ಬಂಗಾಳದ ಕಾರ್ಮಿಕ ಸಚಿವ ಜಾಕೀರ್ ಹೊಸೈನ್ ಮೇಲೆ ಕಚ್ಚಾ ಬಾಂಬ್ ದಾಳಿ ನಡೆದಿತ್ತು. ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>