<p><strong>ಕೋಲ್ಕತ್ತ:</strong> ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ (ಸೆಪ್ಟೆಂಬರ್8) ಪ್ರಚಾರ ಆರಂಭಿಸಲಿದ್ದಾರೆ.</p>.<p>ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ದಕ್ಷಿಣ ಕೋಲ್ಕತ್ತದ ಈ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಭಾನುವಾರ ಅಧಿಕೃತವಾಗಿ ಪ್ರಕಟಿಸಿತ್ತು.ಸಾಂವಿಧಾನಿಕ ಬಿಕ್ಕಟ್ಟು ಶಮನಕ್ಕಾಗಿ ರಾಜ್ಯ ಸರ್ಕಾರದ ಮನವಿ ಮೇರೆಗೆ ಚುನಾವಣಾ ಆಯೋಗವುಶನಿವಾರ ಉಪಚುನಾವಣೆ ಘೋಷಿಸಿತ್ತು.</p>.<p>ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಎದುರು ಸೋಲು ಕಂಡಿದ್ದರು. ಹೀಗಾಗಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲುಇಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ.</p>.<p>ಈ ಹಿಂದೆ ಮಮತಾರ ಆಪ್ತರಾಗಿದ್ದ ಅಧಿಕಾರಿ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು.</p>.<p>ಭವಾನಿಪುರ ಮಾತ್ರವಲ್ಲದೆ ಮುರ್ಷಿದಾಬಾದ್ ಜಿಲ್ಲೆಯ ಸಂಸರ್ಗಂಜ್ ಮತ್ತು ಜಂಗೀಪುರ್ಕ್ಷೇತ್ರಗಳ ಉಪಚುನಾವಣೆಯು ಸೆಪ್ಟೆಂಬರ್30ಕ್ಕೆ ನಿಗದಿಯಾಗಿದೆ. ಬಂಗಾಳ ವಿಧಾನಸಭೆಗೆ ನಡೆದ ಎಂಟು ಹಂತಗಳ ಚುನಾವಣೆ ವೇಳೆ ಸಂಸರ್ಗಂಜ್ ಮತ್ತು ಜಂಗೀಪುರ್ ಕ್ಷೇತ್ರಗಳಲ್ಲಿಮತದಾನ ನಡೆದಿರಲಿಲ್ಲ.</p>.<p>ಅಕ್ಟೋಬರ್3ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.</p>.<p>ಮಮತಾ ಅವರು 2011, 2016ರಲ್ಲಿ ನಡೆದ ಚುನಾವಣೆ ವೇಳೆ ಭವಾನಿಪುರ ಕ್ಷೇತ್ರದಿಂದಲೇ ಸ್ಪರ್ಧಿಸಿ ಗೆಲುವು ಕಂಡಿದ್ದರು.</p>.<p>ಈ ಸಲ ಇಲ್ಲಿ ಗೆದ್ದುಬಂಗಾಳದ ಕೃಷಿ ಸಚಿವರಾಗಿದ್ದ ಹಿರಿಯ ನಾಯಕ ಶೋಭನ್ದೇವ್ ಚಟ್ಟೋಪಾಧ್ಯಾಯ ಅವರು ಮೇ ತಿಂಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಉಪಚುನಾವಣೆ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ (ಸೆಪ್ಟೆಂಬರ್8) ಪ್ರಚಾರ ಆರಂಭಿಸಲಿದ್ದಾರೆ.</p>.<p>ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ದಕ್ಷಿಣ ಕೋಲ್ಕತ್ತದ ಈ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಭಾನುವಾರ ಅಧಿಕೃತವಾಗಿ ಪ್ರಕಟಿಸಿತ್ತು.ಸಾಂವಿಧಾನಿಕ ಬಿಕ್ಕಟ್ಟು ಶಮನಕ್ಕಾಗಿ ರಾಜ್ಯ ಸರ್ಕಾರದ ಮನವಿ ಮೇರೆಗೆ ಚುನಾವಣಾ ಆಯೋಗವುಶನಿವಾರ ಉಪಚುನಾವಣೆ ಘೋಷಿಸಿತ್ತು.</p>.<p>ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಎದುರು ಸೋಲು ಕಂಡಿದ್ದರು. ಹೀಗಾಗಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲುಇಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ.</p>.<p>ಈ ಹಿಂದೆ ಮಮತಾರ ಆಪ್ತರಾಗಿದ್ದ ಅಧಿಕಾರಿ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು.</p>.<p>ಭವಾನಿಪುರ ಮಾತ್ರವಲ್ಲದೆ ಮುರ್ಷಿದಾಬಾದ್ ಜಿಲ್ಲೆಯ ಸಂಸರ್ಗಂಜ್ ಮತ್ತು ಜಂಗೀಪುರ್ಕ್ಷೇತ್ರಗಳ ಉಪಚುನಾವಣೆಯು ಸೆಪ್ಟೆಂಬರ್30ಕ್ಕೆ ನಿಗದಿಯಾಗಿದೆ. ಬಂಗಾಳ ವಿಧಾನಸಭೆಗೆ ನಡೆದ ಎಂಟು ಹಂತಗಳ ಚುನಾವಣೆ ವೇಳೆ ಸಂಸರ್ಗಂಜ್ ಮತ್ತು ಜಂಗೀಪುರ್ ಕ್ಷೇತ್ರಗಳಲ್ಲಿಮತದಾನ ನಡೆದಿರಲಿಲ್ಲ.</p>.<p>ಅಕ್ಟೋಬರ್3ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.</p>.<p>ಮಮತಾ ಅವರು 2011, 2016ರಲ್ಲಿ ನಡೆದ ಚುನಾವಣೆ ವೇಳೆ ಭವಾನಿಪುರ ಕ್ಷೇತ್ರದಿಂದಲೇ ಸ್ಪರ್ಧಿಸಿ ಗೆಲುವು ಕಂಡಿದ್ದರು.</p>.<p>ಈ ಸಲ ಇಲ್ಲಿ ಗೆದ್ದುಬಂಗಾಳದ ಕೃಷಿ ಸಚಿವರಾಗಿದ್ದ ಹಿರಿಯ ನಾಯಕ ಶೋಭನ್ದೇವ್ ಚಟ್ಟೋಪಾಧ್ಯಾಯ ಅವರು ಮೇ ತಿಂಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಉಪಚುನಾವಣೆ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>