ಕಳೆದ ಶುಕ್ರವಾರ ಮಮತಾ ಬ್ಯಾನರ್ಜಿ ಜೊತೆ ಅಲಪನ್ ಬಂಡೋಪಾಧ್ಯಾಯ ಅವರು ಮೋದಿ ಅವರನ್ನು ಭೇಟಿ ಮಾಡಿ ಯಸ್ ಚಂಡಮಾರುತದಿಂದ ಉಂಟಾದ ಹಾನಿ ಕುರಿತಾಗಿ ವರದಿ ಸಲ್ಲಿಸಿದ್ದರು. ಬಳಿಕ ಕೇಂದ್ರ ಸರ್ಕಾರ ಕರೆದಿದ್ದ ಪುನರ್ ಪರಿಶೀಲಿನೆ ಸಭೆಗೆ ಅವರು ಗೈರಾಗಿದ್ದರು. ಇದರ ಬೆನ್ನಲ್ಲೇ ಬಂಡೋಪಾಧ್ಯಾಯ ಅವರನ್ನು ವಾಪಸ್ ಕರೆಸಿಕೊಳ್ಳುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಮೇ 31ರಂದು ವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಿತ್ತು.