<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ವಿಧಾನಸಭೆಯ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಜಗದೀಪ್ ಧಂಕರ್ ಅವರು ಪ್ರಮಾಣವಚನ ಬೋಧಿಸಿದರು.</p>.<p>ಮಮತಾ ಅವರೊಂದಿಗೆ ಟಿಎಂಸಿಯ ಜಾಕೀರ್ ಹೊಸೈನ್ ಮತ್ತು ಅಮಿರುಲ್ ಇಸ್ಲಾಂ ಅವರೂ ಶಾಸಕರಾಗಿ ಪ್ರಮಾಣ ವಚನ ಪಡೆದರು.</p>.<p>ಭವಾನಿಪುರ ಉಪಚುನಾವಣೆಯಲ್ಲಿ 58,835 ಮತಗಳ ಅಂತರದಿಂದ ಜಯಗಳಿಸಿದ ಬ್ಯಾನರ್ಜಿ, ಬಂಗಾಳಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.</p>.<p>ಮಾರ್ಚ್-ಏಪ್ರಿಲ್ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದ ಮಮತಾ ಸ್ಪರ್ಧಿಸಿದ್ದರಾದರೂ, ತಮ್ಮ ಎದುರಾಳಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲುಂಡಿದ್ದರು. ಆದರೂ, ಪಕ್ಷ ಬಹುಮತ ಪಡೆದ ಹಿನ್ನೆಲೆಯಲ್ಲಿ ಅವರು ಮೇ 5ರಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.</p>.<p>ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಮಮತಾ ಅವರು ವಿಧಾನಸಭೆ ಆಯ್ಕೆಯಾಗಿ ಬರಲೇಬೇಕಾದ ಅನಿವಾರ್ಯತೆ ಇತ್ತು . ಹೀಗಾಗಿ ತಾವು ಈ ಹಿಂದೆ ಪ್ರತಿನಿಧಿಸುತ್ತಿದ್ದ ಭವಾನಿಪುರದಿಂದ ಸ್ಪರ್ಧಿಸಲು ಮಮತಾ ತೀರ್ಮಾನಿಸಿದ್ದರು. ಅದಕ್ಕಾಗಿ ಅಲ್ಲಿನ ಚುನಾಯಿತಿ ಪ್ರತಿನಿಧಿ ಶೋಭನ್ ದೇವ್ ಚಟರ್ಜಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದರಂತೆ ನಡೆದ ಉಪ ಚುನಾವಣೆಯಲ್ಲಿ ಮಮತಾ ಅವರು ಭರ್ಜರಿ ಜಯ ದಾಖಲಿಸಿದ್ದರು.</p>.<p>ಮಮತಾ ಅವರೊಂದಿಗೆ ಗುರುವಾರ ಟಿಎಂಸಿ ಶಾಸಕರಾದ ಜಾಕೀರ್ ಹೊಸೇನ್ ಮತ್ತು ಅಮಿರುಲ್ ಇಸ್ಲಾಂ ಕೂಡ ಪ್ರಮಾಣವಚನ ಸ್ವೀಕರಿಸಿದರು. ಜಾಕಿರ್ ಹೊಸೇನ್ ಜಂಗೀಪುರ ಕ್ಷೇತ್ರದಿಂದ 92,480 ಮತಗಳ ಅಂತರದಲ್ಲಿ ಗೆದ್ದಿದ್ದರೆ, ಅಮಿರುಲ್ ಇಸ್ಲಾಂ ಸಂಸೇರ್ಗಂಜ್ನಿಂದ 26,379 ಮತಗಳಿಂದ ಗೆದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ವಿಧಾನಸಭೆಯ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಜಗದೀಪ್ ಧಂಕರ್ ಅವರು ಪ್ರಮಾಣವಚನ ಬೋಧಿಸಿದರು.</p>.<p>ಮಮತಾ ಅವರೊಂದಿಗೆ ಟಿಎಂಸಿಯ ಜಾಕೀರ್ ಹೊಸೈನ್ ಮತ್ತು ಅಮಿರುಲ್ ಇಸ್ಲಾಂ ಅವರೂ ಶಾಸಕರಾಗಿ ಪ್ರಮಾಣ ವಚನ ಪಡೆದರು.</p>.<p>ಭವಾನಿಪುರ ಉಪಚುನಾವಣೆಯಲ್ಲಿ 58,835 ಮತಗಳ ಅಂತರದಿಂದ ಜಯಗಳಿಸಿದ ಬ್ಯಾನರ್ಜಿ, ಬಂಗಾಳಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.</p>.<p>ಮಾರ್ಚ್-ಏಪ್ರಿಲ್ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದ ಮಮತಾ ಸ್ಪರ್ಧಿಸಿದ್ದರಾದರೂ, ತಮ್ಮ ಎದುರಾಳಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲುಂಡಿದ್ದರು. ಆದರೂ, ಪಕ್ಷ ಬಹುಮತ ಪಡೆದ ಹಿನ್ನೆಲೆಯಲ್ಲಿ ಅವರು ಮೇ 5ರಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.</p>.<p>ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಮಮತಾ ಅವರು ವಿಧಾನಸಭೆ ಆಯ್ಕೆಯಾಗಿ ಬರಲೇಬೇಕಾದ ಅನಿವಾರ್ಯತೆ ಇತ್ತು . ಹೀಗಾಗಿ ತಾವು ಈ ಹಿಂದೆ ಪ್ರತಿನಿಧಿಸುತ್ತಿದ್ದ ಭವಾನಿಪುರದಿಂದ ಸ್ಪರ್ಧಿಸಲು ಮಮತಾ ತೀರ್ಮಾನಿಸಿದ್ದರು. ಅದಕ್ಕಾಗಿ ಅಲ್ಲಿನ ಚುನಾಯಿತಿ ಪ್ರತಿನಿಧಿ ಶೋಭನ್ ದೇವ್ ಚಟರ್ಜಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದರಂತೆ ನಡೆದ ಉಪ ಚುನಾವಣೆಯಲ್ಲಿ ಮಮತಾ ಅವರು ಭರ್ಜರಿ ಜಯ ದಾಖಲಿಸಿದ್ದರು.</p>.<p>ಮಮತಾ ಅವರೊಂದಿಗೆ ಗುರುವಾರ ಟಿಎಂಸಿ ಶಾಸಕರಾದ ಜಾಕೀರ್ ಹೊಸೇನ್ ಮತ್ತು ಅಮಿರುಲ್ ಇಸ್ಲಾಂ ಕೂಡ ಪ್ರಮಾಣವಚನ ಸ್ವೀಕರಿಸಿದರು. ಜಾಕಿರ್ ಹೊಸೇನ್ ಜಂಗೀಪುರ ಕ್ಷೇತ್ರದಿಂದ 92,480 ಮತಗಳ ಅಂತರದಲ್ಲಿ ಗೆದ್ದಿದ್ದರೆ, ಅಮಿರುಲ್ ಇಸ್ಲಾಂ ಸಂಸೇರ್ಗಂಜ್ನಿಂದ 26,379 ಮತಗಳಿಂದ ಗೆದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>