ಬುಧವಾರ ಗಂಟೆಗೆ 130ರಿಂದ 145 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಗೆ ಅಪ್ಪಳಿಸಿದ್ದ ‘ಯಸ್’ ಚಂಡಮಾರುತವು, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಅಪಾರ ಹಾನಿಗೆ ಕಾರಣವಾಗಿದೆ. ಎರಡೂ ರಾಜ್ಯಗಳಲ್ಲಿ ಭಾರಿ ಮಳೆ ಸುರಿದಿದೆ. ಮನೆಗಳು ಮತ್ತು ಹೊಲಗಳು ಹಾನಿಗೀಡಾಗಿವೆ. ಒಡಿಶಾದಲ್ಲಿ ಮೂವರು ಮತ್ತು ಬಂಗಾಳದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ.