<p>ಕೋಲ್ಕತ್ತ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಲಿಕುರ್ಚಿಯಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಬಲಪ್ರದರ್ಶನ ನಡೆಸಿದ್ದಾರೆ.</p>.<p>ಪಶ್ಚಿಮ ಬಂಗಾಳ ವಿಧಾನಸಭಾ ಚುನಾಣೆಯ ಎರಡನೇ ಹಂತದಲ್ಲಿ ಏಪ್ರಿಲ್ 1ರಂದು ನಂದಿಗ್ರಾಮದಲ್ಲಿ ಮತದಾನ ನಡೆಯಲಿದೆ. ಇಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯ ಸುವೇಂದು ಅಧಿಕಾರಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.</p>.<p>ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ನಾಯಕರೊಂದಿಗೆ ಮಮತಾ ಗಾಲಿಕುರ್ಚಿಯಲ್ಲಿ ರೇಯಾಪರಾ ಖುದಿರಾಮ್ ಮೋರ್ನಿಂದ ಠಾಕೂರ್ಚೌಕ್ ವರೆಗೆ 8 ಕಿ.ಮೀ. ಉದ್ದರ ರೋಡ್ ಶೋವನ್ನು ಮುನ್ನಡೆಸಿದರು. ಈ ವೇಳೆ ಸಾವಿರಾರು ಪಕ್ಷದ ಕಾರ್ಯಕರ್ತರು ಮಮತಾ ಪರ ಘೋಷಣೆ ಕೂಗಿದರು. ಮಧ್ಯಾಹ್ನದ ಬಳಿಕ ಮತ್ತೊಂದುಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.</p>.<p>ಪ್ರಸಕ್ತ ತಿಂಗಳಲ್ಲಿ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಪ್ರಚಾರದ ವೇಳೆ ಅಪರಿಚಿತರು ತಳ್ಳಿದ ಪರಿಣಾಮ ಮಮತಾ ಕಾಲಿಗೆ ನೋವಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಹಾಗಿದ್ದರೂ ಮಮತಾ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿ ಹಾಕಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/bring-back-the-old-rule-of-appointment-of-agent-817440.html" itemprop="url">ಬಿಜೆಪಿಗೆ ಅನುಕೂಲ ಮಾಡಿಕೊಡಲು ನಿಯಮ ಬದಲಿಸಿದ ಆಯೋಗ: ಟಿಎಂಸಿ ಆರೋಪ </a></p>.<p>ಈ ಘಟನೆಯ ಬಳಿಕ ನಂದಿಗ್ರಾಮದಲ್ಲಿ ನಡೆಸಿದ ಮೊದಲ ಪಾದಯಾತ್ರೆ ಇದಾಗಿದೆ.</p>.<p>ಮಮತಾ ಆಪ್ತರಾಗಿದ್ದ ಸುವೇಂದು ಅಧಿಕಾರಿ ಕಳೆದ ವರ್ಷಾಂತ್ಯದಲ್ಲಿ ಟಿಎಂಸಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅಲ್ಲದೆ ಮಮತಾ ವಿರುದ್ಧ ನಂದಿಗ್ರಾಮದಲ್ಲಿ ನೇರ ಸ್ಪರ್ಧೆಗಿಳಿದಿದ್ದಾರೆ.</p>.<p>ನಂದಿಗ್ರಾಮದಲ್ಲಿ ಬಿಜೆಪಿ 50,000ಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸುವುದಾಗಿ ಸುವೇಂದು ಅಧಿಕಾರಿ ಹೇಳಿಕೆ ನೀಡಿದ್ದರು. ಸುವೇಂದು ಬೆಂಬಲಕ್ಕಾಗಿ ಕೇಂದ್ರದಿಂದ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಲಿಕುರ್ಚಿಯಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಬಲಪ್ರದರ್ಶನ ನಡೆಸಿದ್ದಾರೆ.</p>.<p>ಪಶ್ಚಿಮ ಬಂಗಾಳ ವಿಧಾನಸಭಾ ಚುನಾಣೆಯ ಎರಡನೇ ಹಂತದಲ್ಲಿ ಏಪ್ರಿಲ್ 1ರಂದು ನಂದಿಗ್ರಾಮದಲ್ಲಿ ಮತದಾನ ನಡೆಯಲಿದೆ. ಇಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯ ಸುವೇಂದು ಅಧಿಕಾರಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.</p>.<p>ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ನಾಯಕರೊಂದಿಗೆ ಮಮತಾ ಗಾಲಿಕುರ್ಚಿಯಲ್ಲಿ ರೇಯಾಪರಾ ಖುದಿರಾಮ್ ಮೋರ್ನಿಂದ ಠಾಕೂರ್ಚೌಕ್ ವರೆಗೆ 8 ಕಿ.ಮೀ. ಉದ್ದರ ರೋಡ್ ಶೋವನ್ನು ಮುನ್ನಡೆಸಿದರು. ಈ ವೇಳೆ ಸಾವಿರಾರು ಪಕ್ಷದ ಕಾರ್ಯಕರ್ತರು ಮಮತಾ ಪರ ಘೋಷಣೆ ಕೂಗಿದರು. ಮಧ್ಯಾಹ್ನದ ಬಳಿಕ ಮತ್ತೊಂದುಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.</p>.<p>ಪ್ರಸಕ್ತ ತಿಂಗಳಲ್ಲಿ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಪ್ರಚಾರದ ವೇಳೆ ಅಪರಿಚಿತರು ತಳ್ಳಿದ ಪರಿಣಾಮ ಮಮತಾ ಕಾಲಿಗೆ ನೋವಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಹಾಗಿದ್ದರೂ ಮಮತಾ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿ ಹಾಕಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/bring-back-the-old-rule-of-appointment-of-agent-817440.html" itemprop="url">ಬಿಜೆಪಿಗೆ ಅನುಕೂಲ ಮಾಡಿಕೊಡಲು ನಿಯಮ ಬದಲಿಸಿದ ಆಯೋಗ: ಟಿಎಂಸಿ ಆರೋಪ </a></p>.<p>ಈ ಘಟನೆಯ ಬಳಿಕ ನಂದಿಗ್ರಾಮದಲ್ಲಿ ನಡೆಸಿದ ಮೊದಲ ಪಾದಯಾತ್ರೆ ಇದಾಗಿದೆ.</p>.<p>ಮಮತಾ ಆಪ್ತರಾಗಿದ್ದ ಸುವೇಂದು ಅಧಿಕಾರಿ ಕಳೆದ ವರ್ಷಾಂತ್ಯದಲ್ಲಿ ಟಿಎಂಸಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅಲ್ಲದೆ ಮಮತಾ ವಿರುದ್ಧ ನಂದಿಗ್ರಾಮದಲ್ಲಿ ನೇರ ಸ್ಪರ್ಧೆಗಿಳಿದಿದ್ದಾರೆ.</p>.<p>ನಂದಿಗ್ರಾಮದಲ್ಲಿ ಬಿಜೆಪಿ 50,000ಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸುವುದಾಗಿ ಸುವೇಂದು ಅಧಿಕಾರಿ ಹೇಳಿಕೆ ನೀಡಿದ್ದರು. ಸುವೇಂದು ಬೆಂಬಲಕ್ಕಾಗಿ ಕೇಂದ್ರದಿಂದ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>