ಏಪ್ರಿಲ್ 10ರಂದು ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬಿಹಾರ್ನ ಸಿತಾಲಕುಚಿಯಲ್ಲಿ ಭದ್ರತಾಪಡೆಯ ಗುಂಡೇಟಿಗೆ ಟಿಎಂಸಿಯ ನಾಲ್ವರು ಮೃತಪಟ್ಟಿದ್ದರು. ಬಳಿಕ ಅಮಿತ್ ಶಾ ರಾಜೀನಾಮೆಗೆ ಮಮತಾ ಪಟ್ಟು ಹಿಡಿದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತ್ ಶಾ, ಈ ಚುನಾವಣೆಯು ನನ್ನ ರಾಜೀನಾಮೆಯ ವಿಷಯವಲ್ಲ. ಬದಲಾಗಿ ಮೇ 2ರಂದು ನೀವು (ಮಮತಾ) ರಾಜೀನಾಮೆ ಸಲ್ಲಿಸಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.