<p>ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಸೋಮವಾರ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.</p>.<p>ಟಿಎಂಸಿ ಸೇರಿದ ಎರಡು ದಿನಗಳೊಳಗೆ ಈ ಮಹತ್ವದ ನಿರ್ಧಾರ ಹೊರಬಂದಿದೆ. ಯಶವಂತ್ ಸಿನ್ಹಾ ಅವರಿಗೆ ಟಿಎಂಸಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯತ್ವ ನೀಡಲಾಗಿದೆ.</p>.<p>ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿದ್ದ ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ, ಶನಿವಾರದಂದು ಟಿಎಂಸಿ ಪಕ್ಷವನ್ನು ಸೇರಿದ್ದರು.</p>.<p>ನಂದಿಗ್ರಾಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ನಡೆದ ಅಪರಿಚಿತರ ದಾಳಿಯ ಘಟನೆಯು ತಮ್ಮನ್ನು ಮತ್ತೆ ರಾಜಕೀಯಕ್ಕೆ ಮರಳಲು ಪ್ರೇರೇಪಿಸಿತ್ತು ಎಂದು ಹೇಳಿದ್ದರು.</p>.<p>83 ವರ್ಷದ ಯಶವಂತ ಸಿನ್ಹಾ 2018ರಲ್ಲಿ ಬಿಜೆಪಿ ಪಕ್ಷವನ್ನು ತೊರೆದಿದ್ದರು. ಅಲ್ಲದೆ ನರೇಂದ್ರ ಮೋದಿ ಸರ್ಕಾರದ ನೀತಿಗಳನ್ನು ಟೀಕಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/yashwant-sinha-recalls-mamata-courage-during-kandahar-plane-hijacking-case-812983.html" itemprop="url">ಕಂದಹಾರ್ ವಿಮಾನ ಹೈಜಾಕ್ ವೇಳೆ ದೀದಿ ಧೈರ್ಯ ಸ್ಮರಿಸಿದ ಯಶವಂತ ಸಿನ್ಹಾ </a></p>.<p>ಮಾರ್ಚ್ 10ರಂದು ನಂದಿಗ್ರಾಮದಲ್ಲಿ ಚುನಾವಣೆ ಅಭಿಯಾನದ ವೇಳೆ ಅಪರಿಚಿತರು ತಳ್ಳಿದ ಪರಿಣಾಮ ಮಮತಾ ಬ್ಯಾನರ್ಜಿ ಎಡಗಾಲಿಗೆ ನೋವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.</p>.<p>ಬಳಿಕ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಆದರೆ ಮಮತಾ ಮೇಲಿನ ದಾಳಿಯ ಆರೋಪವನ್ನು ಚುನಾವಣಾ ಆಯೋಗವು ತಳ್ಳಿ ಹಾಕಿದೆ.</p>.<p>ಅತ್ತ ಮಮತಾ ಬ್ಯಾನರ್ಜಿ ಭಾನುವಾರದಂದು ಗಾಲಿಕುರ್ಚಿಯಲ್ಲಿ ಕುಳಿತುಕೊಂಡು ಪ್ರಚಾರ ನಡೆಸುವ ಮೂಲಕ ಗಮನ ಸೆಳೆದಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಸೋಮವಾರ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.</p>.<p>ಟಿಎಂಸಿ ಸೇರಿದ ಎರಡು ದಿನಗಳೊಳಗೆ ಈ ಮಹತ್ವದ ನಿರ್ಧಾರ ಹೊರಬಂದಿದೆ. ಯಶವಂತ್ ಸಿನ್ಹಾ ಅವರಿಗೆ ಟಿಎಂಸಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯತ್ವ ನೀಡಲಾಗಿದೆ.</p>.<p>ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿದ್ದ ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ, ಶನಿವಾರದಂದು ಟಿಎಂಸಿ ಪಕ್ಷವನ್ನು ಸೇರಿದ್ದರು.</p>.<p>ನಂದಿಗ್ರಾಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ನಡೆದ ಅಪರಿಚಿತರ ದಾಳಿಯ ಘಟನೆಯು ತಮ್ಮನ್ನು ಮತ್ತೆ ರಾಜಕೀಯಕ್ಕೆ ಮರಳಲು ಪ್ರೇರೇಪಿಸಿತ್ತು ಎಂದು ಹೇಳಿದ್ದರು.</p>.<p>83 ವರ್ಷದ ಯಶವಂತ ಸಿನ್ಹಾ 2018ರಲ್ಲಿ ಬಿಜೆಪಿ ಪಕ್ಷವನ್ನು ತೊರೆದಿದ್ದರು. ಅಲ್ಲದೆ ನರೇಂದ್ರ ಮೋದಿ ಸರ್ಕಾರದ ನೀತಿಗಳನ್ನು ಟೀಕಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/yashwant-sinha-recalls-mamata-courage-during-kandahar-plane-hijacking-case-812983.html" itemprop="url">ಕಂದಹಾರ್ ವಿಮಾನ ಹೈಜಾಕ್ ವೇಳೆ ದೀದಿ ಧೈರ್ಯ ಸ್ಮರಿಸಿದ ಯಶವಂತ ಸಿನ್ಹಾ </a></p>.<p>ಮಾರ್ಚ್ 10ರಂದು ನಂದಿಗ್ರಾಮದಲ್ಲಿ ಚುನಾವಣೆ ಅಭಿಯಾನದ ವೇಳೆ ಅಪರಿಚಿತರು ತಳ್ಳಿದ ಪರಿಣಾಮ ಮಮತಾ ಬ್ಯಾನರ್ಜಿ ಎಡಗಾಲಿಗೆ ನೋವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.</p>.<p>ಬಳಿಕ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಆದರೆ ಮಮತಾ ಮೇಲಿನ ದಾಳಿಯ ಆರೋಪವನ್ನು ಚುನಾವಣಾ ಆಯೋಗವು ತಳ್ಳಿ ಹಾಕಿದೆ.</p>.<p>ಅತ್ತ ಮಮತಾ ಬ್ಯಾನರ್ಜಿ ಭಾನುವಾರದಂದು ಗಾಲಿಕುರ್ಚಿಯಲ್ಲಿ ಕುಳಿತುಕೊಂಡು ಪ್ರಚಾರ ನಡೆಸುವ ಮೂಲಕ ಗಮನ ಸೆಳೆದಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>