ಇದಕ್ಕೆ ತಿರುಗೇಟು ನೀಡಿದ ಟಿಎಂಸಿ ಸಂಸದ ಸೌಗತಾ ರಾಯ್,‘ಬಿಜೆಪಿ ನಾಯಕರಿಗೆ ಸಂವಿಧಾನ ಮತ್ತು ಅದರ ನಿಬಂಧನೆಗಳ ಬಗ್ಗೆ ಏನೂ ತಿಳಿದಿಲ್ಲ. ರಾಜ್ಯಪಾಲರು ಇಂತಹ ಅಸಾಂವಿಧಾನಿಕ ಕ್ರಮವನ್ನು ಕೈಗೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಾನ್ ಅವರಿಗೆ ತಿಳಿಯಲು ಹೇಗೆ ಸಾಧ್ಯ? ಚುನಾಯಿತ ಸರ್ಕಾರದ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಹೆಚ್ಚಿನ ಶಾಸಕರು ಮುಖ್ಯಮಂತ್ರಿಗಳ ಜತೆ ಇದ್ದಾರೆ. ವಿಧಾನಸಭೆಯಲ್ಲಿ ಟಿಎಂಸಿಗೆ 218 ಶಾಸಕರ ಬೆಂಬಲವಿದೆ’ ಎಂದರು.