ಏ.10ರಂದು ಕೂಚ್ಬಿಹಾರ್ನ ಮತಗಟ್ಟೆಯೊಂದರಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ, ಸಿಐಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದರಿಂದ ನಾಲ್ವರು ಮೃತಪಟ್ಟಿದ್ದರು. ಮೃತರ ಕುಟುಂಬದವರನ್ನು ಮಮತಾ ಅವರು ಬುಧವಾರ ಭೇಟಿಮಾಡಿ ಸಾಂತ್ವನ ಹೇಳಿದರು. ಘಟನೆಯ ಸ್ವಲ್ಪವೇ ಸಮಯದ ನಂತರ ಪ್ರತಿಕ್ರಿಯೆ ನೀಡಿದ್ದ ಮಮತಾ, ‘ಈ ಬಗ್ಗೆ ಸಿಐಡಿ ತನಿಖೆ ನಡೆಸಲಾಗುವುದು’ ಎಂದಿದ್ದರು.