<p><strong>ಭುವನೇಶ್ವರ</strong>: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಅಗತ್ಯವಿಲ್ಲ ಎಂದು ಏಮ್ಸ್ ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇ.ಡಿ) ಸೋಮವಾರ ಬೆಳಿಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಭುವನೇಶ್ವರಕ್ಕೆ ಕರೆದೊಯ್ದಿದ್ದಾರೆ.</p>.<p><a href="https://www.prajavani.net/india-news/arrested-west-bengal-minister-admitted-to-aiims-bhubaneswar-957407.html" itemprop="url">ಶಿಕ್ಷಕರ ನೇಮಕಾತಿ ಹಗರಣ: ಬಂಗಾಳದ ಬಂಧಿತ ಸಚಿವ ಭುವನೇಶ್ವರದ ಏಮ್ಸ್ಗೆ ದಾಖಲು </a></p>.<p>ಚಟರ್ಜಿ ಅವರನ್ನು ಸಂಪೂರ್ಣ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದೇವೆ. ಅವರು ದೀರ್ಘಕಾಲೀನ ಕೆಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಆದರೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಕಿಲ್ಲ ಎಂದು ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕ ಆಶುತೋಷ್ ವಿಶ್ವಾಸ್ ತಿಳಿಸಿದ್ದಾರೆ.</p>.<p>ಚಟರ್ಜಿ ಅವರ ಆರೋಗ್ಯದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ಕಲ್ಕತ್ತ ಹೈಕೋರ್ಟ್ ನಿರ್ದೇಶನದ ಮೇರೆಗೆ ಇ.ಡಿ ಅಧಿಕಾರಿಗಳು ಪಾರ್ಥ ಚಟರ್ಜಿ ಅವರನ್ನು ಬೆಳಿಗ್ಗೆ 9ರ ಸುಮಾರಿಗೆ ಕೋಲ್ಕತ್ತ ವಿಮಾನ ನಿಲ್ದಾಣದಿಂದ ಭುವನೇಶ್ವರಕ್ಕೆ ಏರ್ ಆಂಬುಲೆನ್ಸ್ ಮೂಲಕ ಕರೆದೊಯ್ದಿದ್ದರು. ಬಳಿಕ ಅವರ ಆರೋಗ್ಯ ಪರೀಕ್ಷಿಸಲಾಗಿತ್ತು.</p>.<p><a href="https://www.prajavani.net/india-news/mamata-banerjee-west-bengal-after-minister-arrest-in-jobs-scam-957455.html" itemprop="url">ಶಿಕ್ಷಕರ ನೇಮಕಾತಿ ಹಗರಣ: ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದ ಮಮತಾ ಬ್ಯಾನರ್ಜಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಅಗತ್ಯವಿಲ್ಲ ಎಂದು ಏಮ್ಸ್ ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇ.ಡಿ) ಸೋಮವಾರ ಬೆಳಿಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಭುವನೇಶ್ವರಕ್ಕೆ ಕರೆದೊಯ್ದಿದ್ದಾರೆ.</p>.<p><a href="https://www.prajavani.net/india-news/arrested-west-bengal-minister-admitted-to-aiims-bhubaneswar-957407.html" itemprop="url">ಶಿಕ್ಷಕರ ನೇಮಕಾತಿ ಹಗರಣ: ಬಂಗಾಳದ ಬಂಧಿತ ಸಚಿವ ಭುವನೇಶ್ವರದ ಏಮ್ಸ್ಗೆ ದಾಖಲು </a></p>.<p>ಚಟರ್ಜಿ ಅವರನ್ನು ಸಂಪೂರ್ಣ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದೇವೆ. ಅವರು ದೀರ್ಘಕಾಲೀನ ಕೆಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಆದರೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಕಿಲ್ಲ ಎಂದು ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕ ಆಶುತೋಷ್ ವಿಶ್ವಾಸ್ ತಿಳಿಸಿದ್ದಾರೆ.</p>.<p>ಚಟರ್ಜಿ ಅವರ ಆರೋಗ್ಯದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ಕಲ್ಕತ್ತ ಹೈಕೋರ್ಟ್ ನಿರ್ದೇಶನದ ಮೇರೆಗೆ ಇ.ಡಿ ಅಧಿಕಾರಿಗಳು ಪಾರ್ಥ ಚಟರ್ಜಿ ಅವರನ್ನು ಬೆಳಿಗ್ಗೆ 9ರ ಸುಮಾರಿಗೆ ಕೋಲ್ಕತ್ತ ವಿಮಾನ ನಿಲ್ದಾಣದಿಂದ ಭುವನೇಶ್ವರಕ್ಕೆ ಏರ್ ಆಂಬುಲೆನ್ಸ್ ಮೂಲಕ ಕರೆದೊಯ್ದಿದ್ದರು. ಬಳಿಕ ಅವರ ಆರೋಗ್ಯ ಪರೀಕ್ಷಿಸಲಾಗಿತ್ತು.</p>.<p><a href="https://www.prajavani.net/india-news/mamata-banerjee-west-bengal-after-minister-arrest-in-jobs-scam-957455.html" itemprop="url">ಶಿಕ್ಷಕರ ನೇಮಕಾತಿ ಹಗರಣ: ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದ ಮಮತಾ ಬ್ಯಾನರ್ಜಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>