<p><strong>ಕೋಲ್ಕತ್ತ</strong>: ‘ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಜಪ್ತಿ ಮಾಡಿರುವ ಹಣ ನನಗೆ ಸೇರಿದ್ದಲ್ಲ. ನನ್ನ ವಿರುದ್ಧ ಷಡ್ಯಂತರ ನಡೆಸುತ್ತಿರುವವರು ಯಾರು ಎಂಬುದಕ್ಕೆ ಕಾಲವೇ ಉತ್ತರಿಸಲಿದೆ’ ಎಂದು ಮಾಜಿ ಸಚಿವ ಪಾರ್ಥ ಚಟರ್ಜಿ ಭಾನುವಾರ ಹೇಳಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.</p>.<p>ಆರೋಗ್ಯ ತಪಾಸಣೆಗಾಗಿ ಅವರನ್ನು ಜೋಕಾದಲ್ಲಿರುವ ಇಎಸ್ಐ ಆಸ್ಪತ್ರೆಗೆ ಭಾನುವಾರ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ನನಗಾಗದವರು ನಡೆಸಿರುವ ಪಿತೂರಿಗೆ ಬಲಿಪಶುವಾಗಿದ್ದೇನೆ. ಪಕ್ಷದಿಂದ ಅಮಾನತು ಮಾಡಿರುವುದು ಬೇಸರ ತರಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ನನ್ನನ್ನು ವಜಾಗೊಳಿಸಿದ್ದಾರೆ. ಅವರ ನಿರ್ಧಾರ ಸರಿಯಾಗಿಯೇ ಇದೆ’ ಎಂದಿದ್ದಾರೆ.</p>.<p>ಪಾರ್ಥ ಅವರ ಆಪ್ತೆ ಅರ್ಪಿತಾ ಮುಖರ್ಜಿಗೆ ಸೇರಿದ ಎರಡು ಫ್ಲ್ಯಾಟ್ಗಳಲ್ಲಿ ಶೋಧ ಕಾರ್ಯ ನಡೆಸಿದ್ದ ಇ.ಡಿ ಅಧಿಕಾರಿಗಳು ಕೋಟ್ಯಂತರ ನಗದು ಹಾಗೂ ಚಿನ್ನಾಭರಣ ಜಪ್ತಿ ಮಾಡಿದ್ದರು.</p>.<p>‘ಬಂಧನದ ನಂತರ ಪಾರ್ಥ ಅವರು ಏಕೆ ಮೌನವಾಗಿದ್ದಾರೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ತಾವು ನಿರಪರಾಧಿ ಎಂಬುದನ್ನು ಸಾಬೀತುಪಡಿಸಲಿ. ಹಗರಣಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ‘ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಜಪ್ತಿ ಮಾಡಿರುವ ಹಣ ನನಗೆ ಸೇರಿದ್ದಲ್ಲ. ನನ್ನ ವಿರುದ್ಧ ಷಡ್ಯಂತರ ನಡೆಸುತ್ತಿರುವವರು ಯಾರು ಎಂಬುದಕ್ಕೆ ಕಾಲವೇ ಉತ್ತರಿಸಲಿದೆ’ ಎಂದು ಮಾಜಿ ಸಚಿವ ಪಾರ್ಥ ಚಟರ್ಜಿ ಭಾನುವಾರ ಹೇಳಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.</p>.<p>ಆರೋಗ್ಯ ತಪಾಸಣೆಗಾಗಿ ಅವರನ್ನು ಜೋಕಾದಲ್ಲಿರುವ ಇಎಸ್ಐ ಆಸ್ಪತ್ರೆಗೆ ಭಾನುವಾರ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ನನಗಾಗದವರು ನಡೆಸಿರುವ ಪಿತೂರಿಗೆ ಬಲಿಪಶುವಾಗಿದ್ದೇನೆ. ಪಕ್ಷದಿಂದ ಅಮಾನತು ಮಾಡಿರುವುದು ಬೇಸರ ತರಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ನನ್ನನ್ನು ವಜಾಗೊಳಿಸಿದ್ದಾರೆ. ಅವರ ನಿರ್ಧಾರ ಸರಿಯಾಗಿಯೇ ಇದೆ’ ಎಂದಿದ್ದಾರೆ.</p>.<p>ಪಾರ್ಥ ಅವರ ಆಪ್ತೆ ಅರ್ಪಿತಾ ಮುಖರ್ಜಿಗೆ ಸೇರಿದ ಎರಡು ಫ್ಲ್ಯಾಟ್ಗಳಲ್ಲಿ ಶೋಧ ಕಾರ್ಯ ನಡೆಸಿದ್ದ ಇ.ಡಿ ಅಧಿಕಾರಿಗಳು ಕೋಟ್ಯಂತರ ನಗದು ಹಾಗೂ ಚಿನ್ನಾಭರಣ ಜಪ್ತಿ ಮಾಡಿದ್ದರು.</p>.<p>‘ಬಂಧನದ ನಂತರ ಪಾರ್ಥ ಅವರು ಏಕೆ ಮೌನವಾಗಿದ್ದಾರೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ತಾವು ನಿರಪರಾಧಿ ಎಂಬುದನ್ನು ಸಾಬೀತುಪಡಿಸಲಿ. ಹಗರಣಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>