ಆರೋಗ್ಯ ತಪಾಸಣೆಗಾಗಿ ಅವರನ್ನು ಜೋಕಾದಲ್ಲಿರುವ ಇಎಸ್ಐ ಆಸ್ಪತ್ರೆಗೆ ಭಾನುವಾರ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ನನಗಾಗದವರು ನಡೆಸಿರುವ ಪಿತೂರಿಗೆ ಬಲಿಪಶುವಾಗಿದ್ದೇನೆ. ಪಕ್ಷದಿಂದ ಅಮಾನತು ಮಾಡಿರುವುದು ಬೇಸರ ತರಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ನನ್ನನ್ನು ವಜಾಗೊಳಿಸಿದ್ದಾರೆ. ಅವರ ನಿರ್ಧಾರ ಸರಿಯಾಗಿಯೇ ಇದೆ’ ಎಂದಿದ್ದಾರೆ.