ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದ ಈ ತಂಡ, ಗುರುವಾರ ಪಶ್ಚಿಮ ಬಂಗಾಳವನ್ನು ತಲುಪಿತು. ಇಲ್ಲಿನ ಸೆಕ್ರಟರಿಯೇಟ್ನಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಡಿಜಿಪಿ ಅವರೊಂದಿಗೆ ಸಭೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆ ಬಗ್ಗೆ, ಅದರಲ್ಲೂ ವಿಶೇಷವಾಗಿ ಮೇ 2ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಣೆಯ ನಂತರ ಭುಗಿಲೆದ್ದ ಹಿಂಸಾಚಾರ ಕುರಿತು ವರದಿ ನೀಡುವಂತೆ ಸಚಿವಾಲಯದ ತಂಡ ಧನ್ಕರ್ ಅವರಲ್ಲಿ ಮನವಿ ಮಾಡಿತು.