ಶ್ಯಾಮಲ್ ಚಕ್ರವರ್ತಿ ಅವರ ಸಾವಿಗೆ ಸಂತಾಪ ಸೂಚಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಹಿರಿಯ ನಾಯಕ, ಮಾಜಿ ಸಂಸತ್ ಸದಸ್ಯ ಮತ್ತು ಬಂಗಾಳದ ಮಾಜಿ ಸಚಿವ ಶ್ಯಾಮಲ್ ಚಕ್ರವರ್ತಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು' ಎಂದು ಟ್ವೀಟ್ ಮಾಡಿದ್ದಾರೆ.