ಕಳೆದ ವರ್ಷ ಡಿಸೆಂಬರ್ 10ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಹಿಂಬಾಲಕ ವಾಹನಗಳ ಮೇಲೂ ಕಲ್ಲು ತೂರಾಟ ನಡೆದಿತ್ತು. ಇದನ್ನು ಟಿಎಂಸಿ ನಡೆಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ, ಟಿಎಂಸಿ ಆರೋಪವನ್ನು ನಿರಾಕರಿಸಿತ್ತು. ಘಟನೆಯನ್ನು ಬಿಜೆಪಿಯ ಯೋಜಿತ ಕೃತ್ಯ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅನುಮಾನಿಸಿದ್ದರು.