ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ-ದುರ್ಗಾ ಪೂಜೆ ವಿಗ್ರಹ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ 8 ಸಾವು

ದುರ್ಗಾ ಪೂಜೆಯ ಬಳಿಕ ವಿಗ್ರಹ ವಿಸರ್ಜನೆಯ ಸಂದರ್ಭ ದುರಂತ
Last Updated 6 ಅಕ್ಟೋಬರ್ 2022, 5:07 IST
ಅಕ್ಷರ ಗಾತ್ರ

ಜಲ್ಪೈಗುರಿ: ವಿಜಯದಶಮಿಯಲ್ಲಿ ದುರ್ಗಾ ಪೂಜೆಯ ಬಳಿಕ ವಿಗ್ರಹ ವಿಸರ್ಜನೆಯ ಸಂದರ್ಭದಲ್ಲಿ 8 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನದಿಯಲ್ಲಿ ದುರ್ಗಾ ಮಾತೆಯ ವಿಸರ್ಜನೆ ನಡೆಯುತ್ತಿರುವ ಸಂದರ್ಭದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ನಾಲ್ವರು ಮಹಿಳೆಯರ ಸಹಿತ ಎಂಟು ಮಂದಿ ಮುಳುಗಿ ಮೃತಪಟ್ಟಿರುವುದು ದೃಢಪಟ್ಟಿದೆ.

ಹಲವರು ಕಣ್ಮರೆಯಾಗಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ರಾತ್ರಿ ಘಟನೆ ನಡೆದಿದ್ದು, ದುರ್ಗಾ ಪೂಜೆಯ ವಿಗ್ರಹ ವಿಸರ್ಜನೆ ನಡೆಯುತ್ತಿರುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸೇರಿದ್ದರು.

ಅವಘಡದಲ್ಲಿ ಸಿಲುಕಿ ಎಂಟು ಮಂದಿ ಮೃತಪಟ್ಟಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ಮುಂದುವರಿದಿದೆ. ಸುಮಾರು 50 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಲ್ಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋದಾರ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT