ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಪ್ರತಿಭಟನೆ ವೇಳೆ ದೌರ್ಜನ್ಯ ಎಸಗಿದವರ ವಿರುದ್ಧ ಕ್ರಮ: ಎಸ್‌ಕೆಎಂ

Last Updated 10 ಮೇ 2021, 9:18 IST
ಅಕ್ಷರ ಗಾತ್ರ

ನವದೆಹಲಿ: ‘ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ಸಂಘಟನೆಯು ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಭಾನುವಾರ ಹೇಳಿದೆ.

‘ದೆಹಲಿಯ ಗಡಿಯ ಬಳಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಆಕೆಯ ಮೇಲೆ ದೌರ್ಜನ್ಯವೆಸಗಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವರದಿ ಮಾಡಲಾಗಿದೆ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ’ ಎಂದು ಎಸ್‌ಕೆಎಂ ಹೇಳಿಕೆ ಬಿಡುಗಡೆ ಮಾಡಿದೆ.

‘ನಾವು ಸದಾ ಮಹಿಳೆಯರ ಜತೆಗೆ ನಿಂತಿದ್ದೇವೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿಗಳ ವಿರುದ್ಧ ನಾವು ಈಗಾಗಲೇ ಕ್ರಮ ಕೈಗೊಂಡಿದ್ದೇವೆ. ನಾವು ಇದನ್ನು ನ್ಯಾಯಯುತವಾಗಿ ಹೋರಾಡಲು ಸಿದ್ಧವಿದ್ದೇವೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಪಶ್ಚಿಮ ಬಂಗಾಳದ 26 ವರ್ಷದ ಮಹಿಳೆಯೊಬ್ಬರು ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ’ಕಿಸಾನ್‌ ಸೋಷಿಯಲ್‌ ಆರ್ಮಿ’ ಎಂಬ ಹೆಸರಿನ ಸಂಘಟನೆ ಸದಸ್ಯರೊಂದಿಗೆ ದೆಹಲಿಗೆ ತೆರಳಿದ್ದರು. ಆದರೆ ತಿಕ್ರಿ ಗಡಿಯ ಬಳಿ ಆಕೆಯ ಮೇಲೆ ದೌರ್ಜನ್ಯವೆಸಗಲಾಗಿದೆ. ಈ ಘಟನೆ ನಡೆದ ಒಂದು ವಾರಗಳ ಬಳಿಕ ಆಕೆಗೆ ಕೋವಿಡ್‌ ದೃಢಪಟ್ಟಿದೆ. ಬಹದುರ್ಗಾದ ಖಾಸಗಿ ಆಸ್ಪತ್ರೆಗೆ ಅವರನ್ನು ಸೇರಿಸಲಾಯಿತು. ಆದರೆ ಏಪ್ರಿಲ್‌ 30ರಂದು ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು’ ಎಂದು ರೈತರ ಗುಂಪುಗಳು ಹೇಳಿವೆ.

‘ನಾಲ್ಕು ದಿನಗಳ ಹಿಂದೆ ತಿಕ್ರಿಯ ಸಿಕೆಎಂ ಸಮಿತಿಯು ‘ಕಿಸಾನ್‌ ಸೋಷಿಯಲ್‌ ಆರ್ಮಿ’ ಸಂಘಟನೆಯ ಟೆಂಟ್‌ ಮತ್ತು ಬ್ಯಾನರ್‌ಗಳನ್ನು ಅಲ್ಲಿಂದ ಕಿತ್ತು ಹಾಕಿದೆ. ಅಲ್ಲದೆ ಅವರನ್ನು ರೈತರ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಬಹಿಷ್ಕರಿಸಿದೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿಶೇಷ ತನಿಖಾ ದಳ ತಂಡ ರಚನೆ: ಈ ಮಧ್ಯೆ, ನತದೃಷ್ಟ ಮಹಿಳೆಯ ತಂದೆ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಎಫ್‌ಐಆರ್‌ನಲ್ಲಿ ಇಬ್ಬರು ಪ್ರಮುಖ ಆರೋಪಿಗಳ ಸಹಿತ ಆರು ಮಂದಿಯನ್ನು ಹೆಸರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT