ಗುರುವಾರ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ, ಶಿವಸೇನಾ ಬಂಡಾಯ ನಾಯಕ ಏಕನಾಥ ಶಿಂಧೆ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಫಡಣವೀಸ್ ಘೋಷಿಸಿದ್ದರು. ತಾವು ಸರ್ಕಾರದ ಭಾಗವಾಗಿರುವುದಿಲ್ಲ ಎಂದೂ ಹೇಳಿದ್ದರು. ಆದರೆ, ಬಳಿಕ ಉಪಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ್ದರು. ಹೈಕಮಾಂಡ್ ಸೂಚನೆ ಮೇರೆಗೆ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ ಎನ್ನಲಾಗಿತ್ತು.