ನವದೆಹಲಿ: ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಬೇಡಿಕೆ ಮತ್ತು ಪೂರೈಕೆ, ಆರೋಗ್ಯ ಮೂಲಸೌಕರ್ಯ, ಅಗತ್ಯವಾಗಿ ಬೇಕಾದ ಔಷಧಗಳು ಮತ್ತು ಲಸಿಕೆಯ ಲಭ್ಯತೆಯ ಸ್ಥಿತಿಗತಿ ಕುರಿತು ಮಾಹಿತಿ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಕೋವಿಡ್–19ರ ಎರಡನೇ ಅಲೆಯು ತೀವ್ರವಾಗಿ ಹರಡುತ್ತಿದ್ದು ಅದನ್ನು ತಡೆಯಲು ಮಾಡಿಕೊಂಡಿರುವ ಸಿದ್ಧತೆ ಏನು ಎಂದು ಕೋರ್ಟ್ ಪ್ರಶ್ನಿಸಿದೆ.