ನವದೆಹಲಿ: ಹಣಕಾಸು ಇಲಾಖೆ ಬಜೆಟ್ನೊಂದಿಗೆ ರೈಲ್ವೆ ಮುಂಗಡಪತ್ರ ವಿಲೀನಗೊಳಿಸಿದ್ದರ ಹಿಂದಿನ ಕಾರಣವೇನು ಎಂದು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಪ್ರಶ್ನೆ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಈ ಕುರಿತು ಮಾತನಾಡಿರುವ ಖರ್ಗೆ, ಎಲ್ಲ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯುತ್ತಿದ್ದವು. ಆದರೆ ಹಣಕಾಸು ಇಲಾಖೆಯೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದರ ಸಮಸ್ಯೆ ಎದುರಾಗಿದೆ ಎಂದು ಹೇಳಿದ್ದಾರೆ.
ಹಿಂದಿನ ರೈಲ್ವೆ ಇಲಾಖೆಯು ಬಹಳಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿತ್ತು. ಇದರಿಂದ ಅಗತ್ಯ ಕೆಲಸಗಳನ್ನು ಬೇಗನೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿತ್ತು. ಆದರೆ ಈಗ ಹಣಕಾಸು ಇಲಾಖೆಯ ಒಪ್ಪಿಗೆಗಾಗಿ ಸಾಲುಗಟ್ಟಿ ನಿಂತಿವೆ ಎಂದು ಟೀಕಿಸಿದ್ದಾರೆ.
Things were going well but what was the reason for Railway Budget to be merged with Finance Dept? Earlier Board used to take a lot of decisions & essential work was done at the earliest. But now things are queued up for permission from the Finance Dept: Mallikarjun Kharge in RS pic.twitter.com/iOo6i9vhOr