ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಿಂದ ಭಾರತೀಯರ ಅಪಹರಣ: ಲಭ್ಯವಾಗದ ಮಾಹಿತಿ

ಭಾರತ–ಚೀನಾ ಗಡಿಯಲ್ಲಿ ಐವರು ಗ್ರಾಮಸ್ಥರನ್ನು ಅಪಹರಿಸಿದ ಪಿಎಲ್ಎ
Last Updated 7 ಸೆಪ್ಟೆಂಬರ್ 2020, 13:32 IST
ಅಕ್ಷರ ಗಾತ್ರ

ಇಟಾನಗರ: ‘ಭಾರತ–ಚೀನಾ ಗಡಿಯ ಅಪ್ಪರ್ ಸುಬಾನ್‌ಸಿರಿ ಜಿಲ್ಲೆಯಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಐವರು ಭಾರತೀಯ ಯುವಕರನ್ನು ಅಪಹರಿಸಿದ್ದು, ಅವರು ಎಲ್ಲಿದ್ದಾರೆ ಎನ್ನುವ ಮಾಹಿತಿ ಇನ್ನೂ ದೊರೆತಿಲ್ಲ’ ಎಂದು ಅರುಣಾಚಲ ಪ್ರದೇಶದ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಶುಕ್ರವಾರ ಕಾಡಿನಲ್ಲಿ ಬೇಟೆಯಾಡಲು ಹೋಗಿದ್ದ ಗ್ರಾಮದ ಐವರನ್ನು ಚೀನಾ ಅಪಹರಿಸಲಾಗಿದೆ. ಈ ಬಗ್ಗೆ ಯುವಕರ ಕುಟುಂಬದವರು ಸಾಮಾಜಿಕ ಮಾಧ್ಯಮಗಳಲ್ಲಿ ನಾಪತ್ತೆಯಾಗಿರುವ ಕುರಿತು ಪೋಸ್ಟ್ ಹಾಕಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.

ಯುವಕರ ಜತೆ ಇತರರೂ ಕಾಡಿಗೆ ತೆರಳಿದ್ದರು. ಅವರಲ್ಲಿ ಇಬ್ಬರು ಗ್ರಾಮಕ್ಕೆ ಮರಳಿದ್ದು, ಪಿಎಲ್‌ಎ ಯುವಕರನ್ನು ಅಪಹರಿಸಿರುವ ಕುರಿತು ಮಾಹಿತಿ ನೀಡಿದ್ದರು.

ಅರುಣಾಚಲ ಪ್ರದೇಶದ ಪೂರ್ವ ಸಂಸದೀಯ ಕ್ಷೇತ್ರದ ಪ್ರತಿನಿಧಿ, ಕೇಂದ್ರ ಯುವಜನ ಹಾಗೂ ಕ್ರೀಡಾ ಖಾತೆ ಸಚಿವ ಕಿರೆನ್ ರಿಜಿಜು, ‘ಪಿಎಲ್ಎ ನ ಹಾಟ್‌ಲೈನ್ ಸಂದೇಶಕ್ಕಾಗಿ ಭಾರತೀಯ ಸೇನೆಯು ಕಾಯುತ್ತಿದೆ’ ಎಂದು ಹೇಳಿದ್ದಾರೆ. ‌

ಭಾನುವಾರ ಟ್ವೀಟ್ ಮಾಡಿದ್ದ ಕಿರೆನ್ ‘ಭಾರತೀಯ ಸೇನೆಯು ಈಗಾಗಲೇ ಪಿಎಲ್ಎಗೆ ತನ್ನ ಕಡೆಯಿಂದ ಹಾಟ್‌ಲೈನ್ ಸಂದೇಶ ಕಳಿಸಿದೆ. ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT