<p class="bodytext"><strong>ಇಟಾನಗರ: </strong>‘ಭಾರತ–ಚೀನಾ ಗಡಿಯ ಅಪ್ಪರ್ ಸುಬಾನ್ಸಿರಿ ಜಿಲ್ಲೆಯಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಐವರು ಭಾರತೀಯ ಯುವಕರನ್ನು ಅಪಹರಿಸಿದ್ದು, ಅವರು ಎಲ್ಲಿದ್ದಾರೆ ಎನ್ನುವ ಮಾಹಿತಿ ಇನ್ನೂ ದೊರೆತಿಲ್ಲ’ ಎಂದು ಅರುಣಾಚಲ ಪ್ರದೇಶದ ಪೊಲೀಸರು ಸೋಮವಾರ ತಿಳಿಸಿದ್ದಾರೆ.</p>.<p class="bodytext">ಶುಕ್ರವಾರ ಕಾಡಿನಲ್ಲಿ ಬೇಟೆಯಾಡಲು ಹೋಗಿದ್ದ ಗ್ರಾಮದ ಐವರನ್ನು ಚೀನಾ ಅಪಹರಿಸಲಾಗಿದೆ. ಈ ಬಗ್ಗೆ ಯುವಕರ ಕುಟುಂಬದವರು ಸಾಮಾಜಿಕ ಮಾಧ್ಯಮಗಳಲ್ಲಿ ನಾಪತ್ತೆಯಾಗಿರುವ ಕುರಿತು ಪೋಸ್ಟ್ ಹಾಕಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.</p>.<p class="bodytext">ಯುವಕರ ಜತೆ ಇತರರೂ ಕಾಡಿಗೆ ತೆರಳಿದ್ದರು. ಅವರಲ್ಲಿ ಇಬ್ಬರು ಗ್ರಾಮಕ್ಕೆ ಮರಳಿದ್ದು, ಪಿಎಲ್ಎ ಯುವಕರನ್ನು ಅಪಹರಿಸಿರುವ ಕುರಿತು ಮಾಹಿತಿ ನೀಡಿದ್ದರು.</p>.<p class="bodytext">ಅರುಣಾಚಲ ಪ್ರದೇಶದ ಪೂರ್ವ ಸಂಸದೀಯ ಕ್ಷೇತ್ರದ ಪ್ರತಿನಿಧಿ, ಕೇಂದ್ರ ಯುವಜನ ಹಾಗೂ ಕ್ರೀಡಾ ಖಾತೆ ಸಚಿವ ಕಿರೆನ್ ರಿಜಿಜು, ‘ಪಿಎಲ್ಎ ನ ಹಾಟ್ಲೈನ್ ಸಂದೇಶಕ್ಕಾಗಿ ಭಾರತೀಯ ಸೇನೆಯು ಕಾಯುತ್ತಿದೆ’ ಎಂದು ಹೇಳಿದ್ದಾರೆ. </p>.<p class="bodytext">ಭಾನುವಾರ ಟ್ವೀಟ್ ಮಾಡಿದ್ದ ಕಿರೆನ್ ‘ಭಾರತೀಯ ಸೇನೆಯು ಈಗಾಗಲೇ ಪಿಎಲ್ಎಗೆ ತನ್ನ ಕಡೆಯಿಂದ ಹಾಟ್ಲೈನ್ ಸಂದೇಶ ಕಳಿಸಿದೆ. ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಇಟಾನಗರ: </strong>‘ಭಾರತ–ಚೀನಾ ಗಡಿಯ ಅಪ್ಪರ್ ಸುಬಾನ್ಸಿರಿ ಜಿಲ್ಲೆಯಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಐವರು ಭಾರತೀಯ ಯುವಕರನ್ನು ಅಪಹರಿಸಿದ್ದು, ಅವರು ಎಲ್ಲಿದ್ದಾರೆ ಎನ್ನುವ ಮಾಹಿತಿ ಇನ್ನೂ ದೊರೆತಿಲ್ಲ’ ಎಂದು ಅರುಣಾಚಲ ಪ್ರದೇಶದ ಪೊಲೀಸರು ಸೋಮವಾರ ತಿಳಿಸಿದ್ದಾರೆ.</p>.<p class="bodytext">ಶುಕ್ರವಾರ ಕಾಡಿನಲ್ಲಿ ಬೇಟೆಯಾಡಲು ಹೋಗಿದ್ದ ಗ್ರಾಮದ ಐವರನ್ನು ಚೀನಾ ಅಪಹರಿಸಲಾಗಿದೆ. ಈ ಬಗ್ಗೆ ಯುವಕರ ಕುಟುಂಬದವರು ಸಾಮಾಜಿಕ ಮಾಧ್ಯಮಗಳಲ್ಲಿ ನಾಪತ್ತೆಯಾಗಿರುವ ಕುರಿತು ಪೋಸ್ಟ್ ಹಾಕಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.</p>.<p class="bodytext">ಯುವಕರ ಜತೆ ಇತರರೂ ಕಾಡಿಗೆ ತೆರಳಿದ್ದರು. ಅವರಲ್ಲಿ ಇಬ್ಬರು ಗ್ರಾಮಕ್ಕೆ ಮರಳಿದ್ದು, ಪಿಎಲ್ಎ ಯುವಕರನ್ನು ಅಪಹರಿಸಿರುವ ಕುರಿತು ಮಾಹಿತಿ ನೀಡಿದ್ದರು.</p>.<p class="bodytext">ಅರುಣಾಚಲ ಪ್ರದೇಶದ ಪೂರ್ವ ಸಂಸದೀಯ ಕ್ಷೇತ್ರದ ಪ್ರತಿನಿಧಿ, ಕೇಂದ್ರ ಯುವಜನ ಹಾಗೂ ಕ್ರೀಡಾ ಖಾತೆ ಸಚಿವ ಕಿರೆನ್ ರಿಜಿಜು, ‘ಪಿಎಲ್ಎ ನ ಹಾಟ್ಲೈನ್ ಸಂದೇಶಕ್ಕಾಗಿ ಭಾರತೀಯ ಸೇನೆಯು ಕಾಯುತ್ತಿದೆ’ ಎಂದು ಹೇಳಿದ್ದಾರೆ. </p>.<p class="bodytext">ಭಾನುವಾರ ಟ್ವೀಟ್ ಮಾಡಿದ್ದ ಕಿರೆನ್ ‘ಭಾರತೀಯ ಸೇನೆಯು ಈಗಾಗಲೇ ಪಿಎಲ್ಎಗೆ ತನ್ನ ಕಡೆಯಿಂದ ಹಾಟ್ಲೈನ್ ಸಂದೇಶ ಕಳಿಸಿದೆ. ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>