ನವದೆಹಲಿ: ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ಪಾತ್ರದ ಬಗ್ಗೆ ಇಡೀ ಜಗತ್ತಿಗೇ ಗೊತ್ತಿದೆ. ಅದನ್ನು ನಿರಾಕರಿಸುವ ಪಾಕಿಸ್ತಾನದ ಪ್ರಯತ್ನಗಳಿಂದ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.
ಭಯೋತ್ಪಾದಕ ದಾಳಿಗೆ ತನ್ನ ಭೂಪ್ರದೇಶವನ್ನು ಬಳಕೆಯಾಗದೇ ಇರುವುದನ್ನು ಖಚಿತಪಡಿಸುವಂತೆಯೂ ಮತ್ತು ಮುಂಬೈ, ಉರಿ ಮತ್ತು ಪಠಾಣ್ಕೋಟ್ನಲ್ಲಿ ನಡೆದ ದಾಳಿಯ ರುವಾರಿಗಳನ್ನು ತ್ವರಿತವಾಗಿ ವಿಚಾರಣೆಗೆ ಒಳಪಡಿಸುವಂತೆಯು ಭಾರತ-ಅಮೆರಿಕ ಜಂಟಿ ಹೇಳಿಕೆಮೂಲಕ ಪಾಕಿಸ್ತಾನವನ್ನು ಒತ್ತಾಯಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ, 'ತನಗೆ ಸಂಬಂಧಿಸಿದ ಭಾರತ ಮತ್ತು ಅಮೆರಿಕದ ಜಂಟಿ ಹೇಳಿಕೆಯೂ ಅನಗತ್ಯ ಮತ್ತು ಅಸಂಬದ್ಧ,' ಎಂದು ಹೇಳಿತ್ತು.