<p><strong>ನವದೆಹಲಿ:</strong> ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ಪಾತ್ರದ ಬಗ್ಗೆ ಇಡೀ ಜಗತ್ತಿಗೇ ಗೊತ್ತಿದೆ. ಅದನ್ನು ನಿರಾಕರಿಸುವ ಪಾಕಿಸ್ತಾನದ ಪ್ರಯತ್ನಗಳಿಂದ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.<br /><br />ಭಯೋತ್ಪಾದಕ ದಾಳಿಗೆ ತನ್ನ ಭೂಪ್ರದೇಶವನ್ನು ಬಳಕೆಯಾಗದೇ ಇರುವುದನ್ನು ಖಚಿತಪಡಿಸುವಂತೆಯೂ ಮತ್ತು ಮುಂಬೈ, ಉರಿ ಮತ್ತು ಪಠಾಣ್ಕೋಟ್ನಲ್ಲಿ ನಡೆದ ದಾಳಿಯ ರುವಾರಿಗಳನ್ನು ತ್ವರಿತವಾಗಿ ವಿಚಾರಣೆಗೆ ಒಳಪಡಿಸುವಂತೆಯು ಭಾರತ-ಅಮೆರಿಕ ಜಂಟಿ ಹೇಳಿಕೆಮೂಲಕ ಪಾಕಿಸ್ತಾನವನ್ನು ಒತ್ತಾಯಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ, 'ತನಗೆ ಸಂಬಂಧಿಸಿದ ಭಾರತ ಮತ್ತು ಅಮೆರಿಕದ ಜಂಟಿ ಹೇಳಿಕೆಯೂ ಅನಗತ್ಯ ಮತ್ತು ಅಸಂಬದ್ಧ,' ಎಂದು ಹೇಳಿತ್ತು.</p>.<p>ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆ ವಕ್ತಾರ ಶ್ರೀವಾಸ್ತವ'ವಿಶ್ವಸಂಸ್ಥೆಯಿಂದ ನಿಷೇಧಿಸಲ್ಪಟ್ಟ ಉಗ್ರರನ್ನು ಗರಿಷ್ಠ ಸಂಖ್ಯೆಯಲ್ಲಿ ಹೊಂದಿರುವ ರಾಷ್ಟ್ರ, ಕಡೆಗೆ ತಾನು ಸಂತ್ರಸ್ತ ರಾಷ್ಟ್ರವೆಂದು ಬಿಂಬಿಸಿಕೊಳ್ಳುವ ಪ್ರಯತ್ನವನ್ನೂ ಮಾಡಬಾರದು,' ಎಂದು ಮೂದಲಿಸಿದರು.</p>.<p>ಅಲ್ಲದೆ, ಭಯೋತ್ಪಾದನೆಯನ್ನು ಬೆಂಬಲಿಸುವ ಪಾಕಿಸ್ತಾನದ ಪಾತ್ರದ ಬಗ್ಗೆ ಇಡೀ ಜಗತ್ತಿಗೇ ಸತ್ಯ ಗೊತ್ತಿದೆ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ಪಾತ್ರದ ಬಗ್ಗೆ ಇಡೀ ಜಗತ್ತಿಗೇ ಗೊತ್ತಿದೆ. ಅದನ್ನು ನಿರಾಕರಿಸುವ ಪಾಕಿಸ್ತಾನದ ಪ್ರಯತ್ನಗಳಿಂದ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.<br /><br />ಭಯೋತ್ಪಾದಕ ದಾಳಿಗೆ ತನ್ನ ಭೂಪ್ರದೇಶವನ್ನು ಬಳಕೆಯಾಗದೇ ಇರುವುದನ್ನು ಖಚಿತಪಡಿಸುವಂತೆಯೂ ಮತ್ತು ಮುಂಬೈ, ಉರಿ ಮತ್ತು ಪಠಾಣ್ಕೋಟ್ನಲ್ಲಿ ನಡೆದ ದಾಳಿಯ ರುವಾರಿಗಳನ್ನು ತ್ವರಿತವಾಗಿ ವಿಚಾರಣೆಗೆ ಒಳಪಡಿಸುವಂತೆಯು ಭಾರತ-ಅಮೆರಿಕ ಜಂಟಿ ಹೇಳಿಕೆಮೂಲಕ ಪಾಕಿಸ್ತಾನವನ್ನು ಒತ್ತಾಯಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ, 'ತನಗೆ ಸಂಬಂಧಿಸಿದ ಭಾರತ ಮತ್ತು ಅಮೆರಿಕದ ಜಂಟಿ ಹೇಳಿಕೆಯೂ ಅನಗತ್ಯ ಮತ್ತು ಅಸಂಬದ್ಧ,' ಎಂದು ಹೇಳಿತ್ತು.</p>.<p>ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆ ವಕ್ತಾರ ಶ್ರೀವಾಸ್ತವ'ವಿಶ್ವಸಂಸ್ಥೆಯಿಂದ ನಿಷೇಧಿಸಲ್ಪಟ್ಟ ಉಗ್ರರನ್ನು ಗರಿಷ್ಠ ಸಂಖ್ಯೆಯಲ್ಲಿ ಹೊಂದಿರುವ ರಾಷ್ಟ್ರ, ಕಡೆಗೆ ತಾನು ಸಂತ್ರಸ್ತ ರಾಷ್ಟ್ರವೆಂದು ಬಿಂಬಿಸಿಕೊಳ್ಳುವ ಪ್ರಯತ್ನವನ್ನೂ ಮಾಡಬಾರದು,' ಎಂದು ಮೂದಲಿಸಿದರು.</p>.<p>ಅಲ್ಲದೆ, ಭಯೋತ್ಪಾದನೆಯನ್ನು ಬೆಂಬಲಿಸುವ ಪಾಕಿಸ್ತಾನದ ಪಾತ್ರದ ಬಗ್ಗೆ ಇಡೀ ಜಗತ್ತಿಗೇ ಸತ್ಯ ಗೊತ್ತಿದೆ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>