ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮಾಡುತ್ತಿದ್ದ ಒಂದು ಗುಂಪು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಲಖಿಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದಾಗ, ಎರಡು ಎಸ್ಯವಿಗಳು ಹರಿದು ನಾಲ್ವರು ರೈತರು ಮೃತಪಟ್ಟರು. ಇದರಿಂದ ಕೋಪಗೊಂಡ ಪ್ರತಿಭಟನಕಾರರು ಬಿಜೆಪಿಯ ಇಬ್ಬರು ಕಾರ್ಯಕರ್ತರು ಮತ್ತು ಚಾಲಕನನ್ನು ಕೊಂದರು. ಈ ಹಿಂಸಾಚಾರದಲ್ಲಿ ಸ್ಥಳೀಯ ಪತ್ರಕರ್ತರೊಬ್ಬರೂ ಮೃತಪಟ್ಟಿದ್ದಾರೆ.