ಈ ವೇಳೆ ಕೋಲ್ಕತ್ತದಲ್ಲಿ ಯಾವುದೇ ನಾಯಕರ ವಿಚಾರಣೆಗೆ ಕೇಂದ್ರೀಯ ತನಿಖಾ ಸಂಸ್ಥೆಗಳು ಬಂದಾಗ, ರಾಜ್ಯ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಪಶ್ಚಿಮ ಬಂಗಾಳ ಸರ್ಕಾರವನ್ನು ಹೊಣೆಯಾಗಿಸಬೇಕು. ವಿಚಾರಣೆಗೆ ಹೋಗುವ 72 ಗಂಟೆಗಳ ಮುಂಚಿತವಾಗಿ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಆಗ ರಾಜ್ಯ ಪೊಲೀಸರು, ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ಸಹಕಾರ ನೀಡಲಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.