<p>ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೊ ಯಾತ್ರೆಯಲ್ಲಿ ಜಮ್ಮು–ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರು ಉತ್ಸಾಹದಿಂದಲೇ ಪಾಲ್ಗೊಂಡಿದ್ದರು.</p>.<p>ಆದರೆ, ಲಾಲ್ಚೌಕ್ನಲ್ಲಿ ಭಾನುವಾರ ನಡೆದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಿಂದ ಈ ಮೂವರು ಮಾಜಿ ಮುಖ್ಯಮಂತ್ರಿಗಳು ದೂರ ಉಳಿದಿದದ್ದು ಚರ್ಚೆಗೆ ಕಾರಣವಾಗಿದೆ.</p>.<p>ಶ್ರೀನಗರದಿಂದ ಲಖನ್ಪುರಕ್ಕೆ ತೆರಳಿದ್ದ ಫಾರೂಕ್ ಅಬ್ದುಲ್ಲಾ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಅವರೊಂದಿಗೆ ಹೆಜ್ಜೆ ಹಾಕಿದ್ದರು. ಒಂದು ಹಂತದಲ್ಲಿ, ರಾಹುಲ್ ಗಾಂಧಿ ಅವರನ್ನು ಶಂಕರಾಚಾರ್ಯರಿಗೂ ಹೋಲಿಸಿ, ಹೊಗಳಿದ್ದರು.</p>.<p>ಬಹಿಹಾಲ್ನಲ್ಲಿ ನಡೆದ ಯಾತ್ರೆಯಲ್ಲಿ ಒಮರ್ ಅಬ್ದುಲ್ಲಾ ಪಾಲ್ಗೊಂಡಿದ್ದರು. ಮೆಹಬೂಬಾ ಮುಫ್ತಿ ಹಾಗೂ ಅವರ ಮಗಳು ಇಲ್ತಿಜಾ ಮುಫ್ತಿ ಅವರು ಆವಂತಿಪೊರಾದಲ್ಲಿ ನಡೆದ ಪಾದಯಾತ್ರೆಯಲ್ಲಿ ರಾಹುಲ್ ಅವರಿಗೆ ಸಾಥ್ ನೀಡಿದ್ದರು.</p>.<p>‘ಕಾಶ್ಮೀರ ಮೂಲದ ರಾಜಕೀಯ ಪಕ್ಷಗಳ ನಾಯಕರು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆಹಾಕಿದ್ದರು. ಭಾನುವಾರ ಲಾಲ್ಚೌಕ್ನಲ್ಲಿನಡೆದ ತ್ರಿವರ್ಣ ಧ್ವಜಾರೋಹಣ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು’ ಎಂದು ಹಿರಿಯ ಪತ್ರಕರ್ತ ಅಹ್ಮದ್ ಅಲಿ ಫಯ್ಯಾಜ್ ಟ್ವೀಟ್ ಮಾಡಿದ್ದಾರೆ.</p>.<p>ಜಮ್ಮು–ಕಾಶ್ಮೀರ ಧ್ವಜವನ್ನು ಆರೋಹಣ ಮಾಡಲು ಅನುಮತಿ ನೀಡಿದರೆ ಮಾತ್ರ ತ್ರಿವರ್ಣ ಧ್ವಜಾರೋಹಣ ನೆರವೇರಿಸುವುದಾಗಿ ಮೆಹಬೂಬಾ ಮುಫ್ತಿ ಅವರು ಬಹಿರಂಗವಾಗಿಯೇ ಹೇಳುತ್ತಿದ್ದರು. ಈ ವಿಷಯದ ಬಗ್ಗೆ ಅಬ್ದುಲ್ಲಾ ಮಾತನಾಡಲಿಲ್ಲ.</p>.<p>‘ಒಂದು ವೇಳೆ, ಲಾಲ್ಚೌಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಾರೂಕ್ ಅಬ್ದುಲ್ಲಾ ಅಥವಾ ಒಮರ್ ಅಬ್ದುಲ್ಲಾ ಪಾಲ್ಗೊಂಡಿದ್ದರೆ, ಆಗ ಆ ವಿದ್ಯಮಾನವು ಮೆಹಬೂಬಾ ಮುಫ್ತಿ ಅವರಿಗೆ ರಾಜಕೀಯವಾಗಿ ಭಾರಿ ಲಾಭ ತಂದುಕೊಡುತ್ತಿತ್ತು. ಈ ಕಾರಣಕ್ಕಾಗಿಯೇ ಅಬ್ದುಲ್ಲಾಗಳು ಕಾರ್ಯಕ್ರಮದಿಂದ ದೂರ ಉಳಿದರು’ ಎಂದು ರಾಜಕೀಯ ವಿಶ್ಲೇಷಕ ಮಜೀದ್ ಹೈದರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೊ ಯಾತ್ರೆಯಲ್ಲಿ ಜಮ್ಮು–ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರು ಉತ್ಸಾಹದಿಂದಲೇ ಪಾಲ್ಗೊಂಡಿದ್ದರು.</p>.<p>ಆದರೆ, ಲಾಲ್ಚೌಕ್ನಲ್ಲಿ ಭಾನುವಾರ ನಡೆದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಿಂದ ಈ ಮೂವರು ಮಾಜಿ ಮುಖ್ಯಮಂತ್ರಿಗಳು ದೂರ ಉಳಿದಿದದ್ದು ಚರ್ಚೆಗೆ ಕಾರಣವಾಗಿದೆ.</p>.<p>ಶ್ರೀನಗರದಿಂದ ಲಖನ್ಪುರಕ್ಕೆ ತೆರಳಿದ್ದ ಫಾರೂಕ್ ಅಬ್ದುಲ್ಲಾ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಅವರೊಂದಿಗೆ ಹೆಜ್ಜೆ ಹಾಕಿದ್ದರು. ಒಂದು ಹಂತದಲ್ಲಿ, ರಾಹುಲ್ ಗಾಂಧಿ ಅವರನ್ನು ಶಂಕರಾಚಾರ್ಯರಿಗೂ ಹೋಲಿಸಿ, ಹೊಗಳಿದ್ದರು.</p>.<p>ಬಹಿಹಾಲ್ನಲ್ಲಿ ನಡೆದ ಯಾತ್ರೆಯಲ್ಲಿ ಒಮರ್ ಅಬ್ದುಲ್ಲಾ ಪಾಲ್ಗೊಂಡಿದ್ದರು. ಮೆಹಬೂಬಾ ಮುಫ್ತಿ ಹಾಗೂ ಅವರ ಮಗಳು ಇಲ್ತಿಜಾ ಮುಫ್ತಿ ಅವರು ಆವಂತಿಪೊರಾದಲ್ಲಿ ನಡೆದ ಪಾದಯಾತ್ರೆಯಲ್ಲಿ ರಾಹುಲ್ ಅವರಿಗೆ ಸಾಥ್ ನೀಡಿದ್ದರು.</p>.<p>‘ಕಾಶ್ಮೀರ ಮೂಲದ ರಾಜಕೀಯ ಪಕ್ಷಗಳ ನಾಯಕರು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆಹಾಕಿದ್ದರು. ಭಾನುವಾರ ಲಾಲ್ಚೌಕ್ನಲ್ಲಿನಡೆದ ತ್ರಿವರ್ಣ ಧ್ವಜಾರೋಹಣ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು’ ಎಂದು ಹಿರಿಯ ಪತ್ರಕರ್ತ ಅಹ್ಮದ್ ಅಲಿ ಫಯ್ಯಾಜ್ ಟ್ವೀಟ್ ಮಾಡಿದ್ದಾರೆ.</p>.<p>ಜಮ್ಮು–ಕಾಶ್ಮೀರ ಧ್ವಜವನ್ನು ಆರೋಹಣ ಮಾಡಲು ಅನುಮತಿ ನೀಡಿದರೆ ಮಾತ್ರ ತ್ರಿವರ್ಣ ಧ್ವಜಾರೋಹಣ ನೆರವೇರಿಸುವುದಾಗಿ ಮೆಹಬೂಬಾ ಮುಫ್ತಿ ಅವರು ಬಹಿರಂಗವಾಗಿಯೇ ಹೇಳುತ್ತಿದ್ದರು. ಈ ವಿಷಯದ ಬಗ್ಗೆ ಅಬ್ದುಲ್ಲಾ ಮಾತನಾಡಲಿಲ್ಲ.</p>.<p>‘ಒಂದು ವೇಳೆ, ಲಾಲ್ಚೌಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಾರೂಕ್ ಅಬ್ದುಲ್ಲಾ ಅಥವಾ ಒಮರ್ ಅಬ್ದುಲ್ಲಾ ಪಾಲ್ಗೊಂಡಿದ್ದರೆ, ಆಗ ಆ ವಿದ್ಯಮಾನವು ಮೆಹಬೂಬಾ ಮುಫ್ತಿ ಅವರಿಗೆ ರಾಜಕೀಯವಾಗಿ ಭಾರಿ ಲಾಭ ತಂದುಕೊಡುತ್ತಿತ್ತು. ಈ ಕಾರಣಕ್ಕಾಗಿಯೇ ಅಬ್ದುಲ್ಲಾಗಳು ಕಾರ್ಯಕ್ರಮದಿಂದ ದೂರ ಉಳಿದರು’ ಎಂದು ರಾಜಕೀಯ ವಿಶ್ಲೇಷಕ ಮಜೀದ್ ಹೈದರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>