<p class="title"><strong>ನವದೆಹಲಿ</strong>: ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಭುಗಿಲೆದ್ದಿರುವ ಕೋಮು ಗಲಭೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏಕೆ ಮೌನ ವಹಿಸಿದ್ದಾರೆ? ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಭಾನುವಾರ ಪ್ರಶ್ನಿಸಿದ್ದಾರೆ. ಜೊತೆಗೆ ಹಿಂಸಾಚಾರಕ್ಕೆ 2024ರ ಸಾರ್ವತ್ರಿಕ ಚುನಾವಣೆ ಕಾರಣವಾಗದಿರಲಿ ಎಂದಿದ್ದಾರೆ.</p>.<p>ಬಂಗಾಳ ಮತ್ತು ಬಿಹಾರದಲ್ಲಿ ಬೆಂಕಿ ಹಚ್ಚುವುದನ್ನು ನಿಲ್ಲಿಸಿ, ವಿಷ ಬೀಜ ಬಿತ್ತುವ ಕೆಲಸವನ್ನು ಮಾಡಬೇಡಿ, ಇದರಿಂದ ಸಾಮಾನ್ಯ ವ್ಯಕ್ತಿ ಬಲಿಯಾಗುತ್ತಾನೆ. ಇದು ಕೇವಲ ರಾಜಕಾರಣಿಗಳಿಗೆ ಮತ್ತು ಅವರ ಕಾರ್ಯತಂತ್ರಗಳಿಗೆ ಪ್ರಯೋಜನವಾಗಲಿದೆ ಎಂದು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.</p>.<p>ಈ ಬಗ್ಗೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮಾತನಾಡಬೇಕು, ಈ ರೀತಿಯ ಹಿಂಸಾಚಾರವನ್ನು ಖಂಡಿಸಬೇಕು. ಈ ಹಿಂಸಾಚಾರದ ನಡುವೆ ಅವರಿಬ್ಬರೂ ಮಾತನಾಡದಿರುವುದು ದುರದೃಷ್ಟಕರ, ಅವರೇಕೆ ಸುಮ್ಮನಿದ್ದಾರೆ?, ಇದು ಒಂದು ಪಕ್ಷಕ್ಕೆ ಸಂಬಂಧಿಸಿದ್ದಲ್ಲ, ಹಿಂಸಾತ್ಮಕ ಪರಿಸರದಿಂದ ದೂರವುಳಿದು ದೇಶ ಮುಂದುವರೆಯಬೇಕಿದೆ ಎಂದರು.</p>.<p>ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರ ಬಳಿ ಪರಿಸ್ಥಿತಿ ನಿಯಂತ್ರಿಸಲು ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಇಷ್ಟು ಕಾಳಜಿ ಸಾಕಾಗುವುದಿಲ್ಲ ಎಂದು ಸಿಬಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಭುಗಿಲೆದ್ದಿರುವ ಕೋಮು ಗಲಭೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏಕೆ ಮೌನ ವಹಿಸಿದ್ದಾರೆ? ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಭಾನುವಾರ ಪ್ರಶ್ನಿಸಿದ್ದಾರೆ. ಜೊತೆಗೆ ಹಿಂಸಾಚಾರಕ್ಕೆ 2024ರ ಸಾರ್ವತ್ರಿಕ ಚುನಾವಣೆ ಕಾರಣವಾಗದಿರಲಿ ಎಂದಿದ್ದಾರೆ.</p>.<p>ಬಂಗಾಳ ಮತ್ತು ಬಿಹಾರದಲ್ಲಿ ಬೆಂಕಿ ಹಚ್ಚುವುದನ್ನು ನಿಲ್ಲಿಸಿ, ವಿಷ ಬೀಜ ಬಿತ್ತುವ ಕೆಲಸವನ್ನು ಮಾಡಬೇಡಿ, ಇದರಿಂದ ಸಾಮಾನ್ಯ ವ್ಯಕ್ತಿ ಬಲಿಯಾಗುತ್ತಾನೆ. ಇದು ಕೇವಲ ರಾಜಕಾರಣಿಗಳಿಗೆ ಮತ್ತು ಅವರ ಕಾರ್ಯತಂತ್ರಗಳಿಗೆ ಪ್ರಯೋಜನವಾಗಲಿದೆ ಎಂದು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.</p>.<p>ಈ ಬಗ್ಗೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮಾತನಾಡಬೇಕು, ಈ ರೀತಿಯ ಹಿಂಸಾಚಾರವನ್ನು ಖಂಡಿಸಬೇಕು. ಈ ಹಿಂಸಾಚಾರದ ನಡುವೆ ಅವರಿಬ್ಬರೂ ಮಾತನಾಡದಿರುವುದು ದುರದೃಷ್ಟಕರ, ಅವರೇಕೆ ಸುಮ್ಮನಿದ್ದಾರೆ?, ಇದು ಒಂದು ಪಕ್ಷಕ್ಕೆ ಸಂಬಂಧಿಸಿದ್ದಲ್ಲ, ಹಿಂಸಾತ್ಮಕ ಪರಿಸರದಿಂದ ದೂರವುಳಿದು ದೇಶ ಮುಂದುವರೆಯಬೇಕಿದೆ ಎಂದರು.</p>.<p>ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರ ಬಳಿ ಪರಿಸ್ಥಿತಿ ನಿಯಂತ್ರಿಸಲು ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಇಷ್ಟು ಕಾಳಜಿ ಸಾಕಾಗುವುದಿಲ್ಲ ಎಂದು ಸಿಬಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>