<p><strong>ಡೆಹ್ರಾಡೂನ್:</strong> ಮಾನವ ಮತ್ತು ನಿಸರ್ಗ ಮೂಲದ ಅಂಶಗಳು ಜೋಶಿಮಠ ಊರಿನ ಅವನತಿಗೆ ಕಾರಣವಾಗಿವೆ ಎಂದು 'ವಾಡಿಯಾ ಇನ್ಸ್ಟಿಟ್ಯೂಟ್ ಆಫ್ ಹಿಮಾಲಯನ್ ಜಿಯಾಲಜಿ'ಯ ನಿರ್ದೇಶಕ ಕಲಾಚಂದ್ ಸೇನ್ ಶುಕ್ರವಾರ ಹೇಳಿದ್ದಾರೆ.</p>.<p>ಸಮಸ್ಯೆಗೆ ಇತ್ತೀಚಿನ ಅಂಶಗಳು ಮಾತ್ರ ಕಾರಣವಲ್ಲ, ಹಲವಾರು ವರ್ಷಗಳಿಂದ ಸಮಸ್ಯೆ ಬೆಳೆಯುತ್ತಾ ಬಂದಿದೆ ಎಂದು ಅವರು ವಿವರಿಸಿದ್ದಾರೆ.</p>.<p>‘ಜೋಶಿಮಠ ಊರು ಕುಸಿತವಾಗಲು, ಅಲ್ಲಿನ ಕಟ್ಟಡಗಳ ಅಡಿಪಾಯಗಳು ದುರ್ಬಲವಾಗಲು ಮೂರು ಮುಖ್ಯ ಕಾರಣಗಳಿವೆ. ಶತಮಾನಕ್ಕೂ ಹೆಚ್ಚು ಹಿಂದೆ ಭೂಕಂಪದಿಂದ ಉಂಟಾದ ಭೂಕುಸಿತದ ಅವಶೇಷಗಳ ಮೇಲೆ ಊರು ಅಭಿವೃದ್ಧಿಯಾಗಿದೆ. ಈ ಪ್ರದೇಶವು ಭೂಕಂಪನ ವಲಯ ‘V’ ಯಲ್ಲಿ ನೆಲೆಗೊಂಡಿದೆ. ಹೀಗಾಗಿ ಈ ಸ್ಥಳದಲ್ಲಿ ಹೆಚ್ಚಾಗಿ ಭೂಕಂಪನಗಳು ಸಂಭವಿಸುತ್ತಲೇ ಇರುತ್ತವೆ, ಮಣ್ಣಿನಡಿ ನೀರು ಜಿನುಗುತ್ತಲೇ ಇರುತ್ತದೆ. ಈ ಕಾರಣದಿಂದಾಗಿ ಕಾಲಾನಂತರದಲ್ಲಿ ನೆಲದಡಿಯ ಬಂಡೆಗಳು ಧಾರಣ ಶಕ್ತಿಯನ್ನು ಕಳೆದುಕೊಳ್ಳುತ್ತವೆ. ಇಡೀ ಪ್ರದೇಶ ದುರ್ಬಲವಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<p>‘ಭೂಕುಸಿತದ ಅವಶೇಷಗಳ ಮೇಲೆ ಜೋಶಿಮಠದ ರಚನೆಯಾಗಿರುವ ಬಗ್ಗೆ ಅಟ್ಕಿನ್ಸ್ 1886ರಲ್ಲಿ ಹಿಮಾಲಯನ್ ಗೆಜೆಟಿಯರ್ನಲ್ಲಿ ಮೊದಲ ಬಾರಿಗೆ ಬರೆದಿದ್ದಾರೆ. ಮಿಶ್ರಾ ಸಮಿತಿಯು 1976 ರಲ್ಲಿ ತನ್ನ ವರದಿಯಲ್ಲಿ ಇದೇ ಅಂಶವನ್ನೇ ಒತ್ತಿ ಹೇಳಿದೆ’ ಎಂದು ಸೇನ್ ಹೇಳಿದರು.</p>.<p>ಕಳೆದ ವರ್ಷ ಋಷಿಗಂಗಾ ಮತ್ತು ಧೌಲಿಗಂಗಾ ನದಿಗಳಲ್ಲಿ ಉಂಟಾದ ಪ್ರವಾಹ, ಹಿಮಾಲಯದ ನದಿಗಳು ಮತ್ತು ಭಾರೀ ಮಳೆಯು ಇಲ್ಲಿನ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p><strong>ಮಾನವ ಮೂಲದ ಕಾರಣ...</strong></p>.<p>ಉತ್ತರಾಖಂಡದಲ್ಲಿ ಅದರಲ್ಲಿಯೂ ವಿಶೇಷವಾಗಿ ಜೋಶಿಮಠವು ಇರುವ ಚಮೋಲಿ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳು ನಿರಂತರವಾಗಿ ನಡೆಯುತ್ತಿವೆ. 2021ರ ಮೇಯಲ್ಲಿ ಚಮೋಲಿ ಜಿಲ್ಲೆಯಲ್ಲಿ ಭೂಕಂಪ ಉಂಟಾಗಿತ್ತು. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.3ರಷ್ಟಿತ್ತು. ಭೂಕಂಪನದ ಕೇಂದ್ರವು ಜೋಶಿಮಠದ ಸಮೀಪವೇ ಇತ್ತು.</p>.<p>2021ರ ಫೆಬ್ರುವರಿಯಲ್ಲಿ ತಪೋವನ ವಿಷ್ಣುಗಡ ಜಲವಿದ್ಯುತ್ ಯೋಜನೆಯ ಅಣೆಕಟ್ಟೆಯ ಸಮೀಪ ಸಂಭವಿಸಿದ್ದ ಹಿಮಕುಸಿತದಲ್ಲಿ 204 ಮಂದಿ ನಾಪತ್ತೆಯಾಗಿದ್ದರು. ಅದರಲ್ಲಿ 83 ಮಂದಿಯ ಮೃತದೇಹ ಮತ್ತು 36 ಮಂದಿಯ ದೇಹದ ಭಾಗಗಳು ಸಿಕ್ಕಿದ್ದವು. ಇಂತಹ ದುರಂತಗಳು ಸಾಮಾನ್ಯ ಎಂಬಂತೆ ಇಲ್ಲಿ ಘಟಿಸುತ್ತಿವೆ.</p>.<p>ಈ ಪ್ರದೇಶದಲ್ಲಿ 15,000ಕ್ಕೂ ಹೆಚ್ಚು ಹಿಮಗಲ್ಲುಗಳಿವೆ. ಪ್ರತಿ ದಶಕದಲ್ಲಿ ಇವು 100ರಿಂದ 200 ಅಡಿಯಷ್ಟು ಕೆಳಕ್ಕೆ ಇಳಿಯುತ್ತಿವೆ. ಈ ಹಿಮಗಲ್ಲುಗಳು ಅತ್ಯಂತ ವೇಗವಾಗಿ ಕರಗುತ್ತಿವೆ. ಹೀಗೆ ಕರಗಿದ ಹಿಮಗಲ್ಲುಗಳು ದಿಢೀರ್ ಹಿಮಸರೋವರಗಳನ್ನು ಸೃಷ್ಟಿಸುತ್ತವೆ. ನೀರನ್ನು ಹಿಡಿದಿಟ್ಟುಕೊಳ್ಳಲಾಗದ ಮಣ್ಣು ಬಿರುಕು ಬಿಡುತ್ತದೆ ಮತ್ತು ದಿಢೀರ್ ಪ್ರವಾಹಗಳು ಉಂಟಾಗುತ್ತವೆ. 2021ರಲ್ಲಿ ಧೌಲಿಗಂಗಾ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ 70ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.</p>.<p>ಅಲಕನಂದಾ–ಭಾಗೀರಥಿ ನದಿಗೆ ಅಣೆಕಟ್ಟೆ ಕಟ್ಟಲೇಬಾರದು ಎಂದು ಪರಿಣತರ ಸಮಿತಿಯು ಶಿಫಾರಸು ಮಾಡಿತ್ತು. ಹಿಮಗಲ್ಲು ಪ್ರದೇಶದಲ್ಲಿ ಅಣೆಕಟ್ಟೆ ನಿರ್ಮಿಸಬೇಡಿ ಎಂದು ಸುಪ್ರೀಂ ಕೋರ್ಟ್ ಕೂಡ 2014ರಲ್ಲಿ ಹೇಳಿತ್ತು. ಆದರೆ ಸರ್ಕಾರವು ಈ ಸಲಹೆಯನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಅಣೆಕಟ್ಟೆ ನಿರ್ಮಾಣ ಮಾಡಲಾಯಿತು.</p>.<p>ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರೀನಾಥವನ್ನು ಸಂಪರ್ಕಿಸುವ 900 ಕಿ.ಮೀ. ಉದ್ದದ ಹೆದ್ದಾರಿ–ಚಾರ್ ಧಾಮ್ ಹೆದ್ದಾರಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ₹12,000 ಕೋಟಿ ವೆಚ್ಚದ ಯೋಜನೆ ಇದು. ನಿರ್ಮಾಣ ಕಾಮಗಾರಿಗಳನ್ನು ನಡೆಸಲೇಬಾರದು ಎಂದು ಪರಿಣತರು ಹಲವು ಬಾರಿ ಹೇಳಿದ್ದಾರೆ. ಆದರೆ, ಉತ್ತರಾಖಂಡದಲ್ಲಿ ಉಂಟಾದ ಪ್ರವಾಹಕ್ಕೆ ಈ ಯೋಜನೆ ಕಾರಣ ಅಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 2021ರಲ್ಲಿ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದರು.</p>.<p><strong>ಇವುಗಳನ್ನೂ ಓದಿ </strong></p>.<p><a href="https://www.prajavani.net/india-news/central-govt-forms-panel-to-study-gradual-sinking-of-land-in-joshimath-1003855.html" itemprop="url">ಕುಸಿಯುತ್ತಿರುವ ಜೋಶಿಮಠದ ಬಗ್ಗೆ ಕ್ಷಿಪ್ರ ಅಧ್ಯಯನ ನಡೆಸಲು ಸಮಿತಿ ರಚಿಸಿದ ಕೇಂದ್ರ </a></p>.<p><a href="https://www.prajavani.net/explainer/uttarakhand-joshimath-town-reporting-an-increase-in-landslides-and-hundreds-of-houses-at-the-hill-1003477.html" itemprop="url">ಆಳ–ಅಗಲ: ಹಿಮಾಲಯ ತಪ್ಪಲಿನ ಜೋಶಿಮಠ ಪಟ್ಟಣಕ್ಕೆ ಕುಸಿತದ ಭೀತಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಮಾನವ ಮತ್ತು ನಿಸರ್ಗ ಮೂಲದ ಅಂಶಗಳು ಜೋಶಿಮಠ ಊರಿನ ಅವನತಿಗೆ ಕಾರಣವಾಗಿವೆ ಎಂದು 'ವಾಡಿಯಾ ಇನ್ಸ್ಟಿಟ್ಯೂಟ್ ಆಫ್ ಹಿಮಾಲಯನ್ ಜಿಯಾಲಜಿ'ಯ ನಿರ್ದೇಶಕ ಕಲಾಚಂದ್ ಸೇನ್ ಶುಕ್ರವಾರ ಹೇಳಿದ್ದಾರೆ.</p>.<p>ಸಮಸ್ಯೆಗೆ ಇತ್ತೀಚಿನ ಅಂಶಗಳು ಮಾತ್ರ ಕಾರಣವಲ್ಲ, ಹಲವಾರು ವರ್ಷಗಳಿಂದ ಸಮಸ್ಯೆ ಬೆಳೆಯುತ್ತಾ ಬಂದಿದೆ ಎಂದು ಅವರು ವಿವರಿಸಿದ್ದಾರೆ.</p>.<p>‘ಜೋಶಿಮಠ ಊರು ಕುಸಿತವಾಗಲು, ಅಲ್ಲಿನ ಕಟ್ಟಡಗಳ ಅಡಿಪಾಯಗಳು ದುರ್ಬಲವಾಗಲು ಮೂರು ಮುಖ್ಯ ಕಾರಣಗಳಿವೆ. ಶತಮಾನಕ್ಕೂ ಹೆಚ್ಚು ಹಿಂದೆ ಭೂಕಂಪದಿಂದ ಉಂಟಾದ ಭೂಕುಸಿತದ ಅವಶೇಷಗಳ ಮೇಲೆ ಊರು ಅಭಿವೃದ್ಧಿಯಾಗಿದೆ. ಈ ಪ್ರದೇಶವು ಭೂಕಂಪನ ವಲಯ ‘V’ ಯಲ್ಲಿ ನೆಲೆಗೊಂಡಿದೆ. ಹೀಗಾಗಿ ಈ ಸ್ಥಳದಲ್ಲಿ ಹೆಚ್ಚಾಗಿ ಭೂಕಂಪನಗಳು ಸಂಭವಿಸುತ್ತಲೇ ಇರುತ್ತವೆ, ಮಣ್ಣಿನಡಿ ನೀರು ಜಿನುಗುತ್ತಲೇ ಇರುತ್ತದೆ. ಈ ಕಾರಣದಿಂದಾಗಿ ಕಾಲಾನಂತರದಲ್ಲಿ ನೆಲದಡಿಯ ಬಂಡೆಗಳು ಧಾರಣ ಶಕ್ತಿಯನ್ನು ಕಳೆದುಕೊಳ್ಳುತ್ತವೆ. ಇಡೀ ಪ್ರದೇಶ ದುರ್ಬಲವಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<p>‘ಭೂಕುಸಿತದ ಅವಶೇಷಗಳ ಮೇಲೆ ಜೋಶಿಮಠದ ರಚನೆಯಾಗಿರುವ ಬಗ್ಗೆ ಅಟ್ಕಿನ್ಸ್ 1886ರಲ್ಲಿ ಹಿಮಾಲಯನ್ ಗೆಜೆಟಿಯರ್ನಲ್ಲಿ ಮೊದಲ ಬಾರಿಗೆ ಬರೆದಿದ್ದಾರೆ. ಮಿಶ್ರಾ ಸಮಿತಿಯು 1976 ರಲ್ಲಿ ತನ್ನ ವರದಿಯಲ್ಲಿ ಇದೇ ಅಂಶವನ್ನೇ ಒತ್ತಿ ಹೇಳಿದೆ’ ಎಂದು ಸೇನ್ ಹೇಳಿದರು.</p>.<p>ಕಳೆದ ವರ್ಷ ಋಷಿಗಂಗಾ ಮತ್ತು ಧೌಲಿಗಂಗಾ ನದಿಗಳಲ್ಲಿ ಉಂಟಾದ ಪ್ರವಾಹ, ಹಿಮಾಲಯದ ನದಿಗಳು ಮತ್ತು ಭಾರೀ ಮಳೆಯು ಇಲ್ಲಿನ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p><strong>ಮಾನವ ಮೂಲದ ಕಾರಣ...</strong></p>.<p>ಉತ್ತರಾಖಂಡದಲ್ಲಿ ಅದರಲ್ಲಿಯೂ ವಿಶೇಷವಾಗಿ ಜೋಶಿಮಠವು ಇರುವ ಚಮೋಲಿ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳು ನಿರಂತರವಾಗಿ ನಡೆಯುತ್ತಿವೆ. 2021ರ ಮೇಯಲ್ಲಿ ಚಮೋಲಿ ಜಿಲ್ಲೆಯಲ್ಲಿ ಭೂಕಂಪ ಉಂಟಾಗಿತ್ತು. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.3ರಷ್ಟಿತ್ತು. ಭೂಕಂಪನದ ಕೇಂದ್ರವು ಜೋಶಿಮಠದ ಸಮೀಪವೇ ಇತ್ತು.</p>.<p>2021ರ ಫೆಬ್ರುವರಿಯಲ್ಲಿ ತಪೋವನ ವಿಷ್ಣುಗಡ ಜಲವಿದ್ಯುತ್ ಯೋಜನೆಯ ಅಣೆಕಟ್ಟೆಯ ಸಮೀಪ ಸಂಭವಿಸಿದ್ದ ಹಿಮಕುಸಿತದಲ್ಲಿ 204 ಮಂದಿ ನಾಪತ್ತೆಯಾಗಿದ್ದರು. ಅದರಲ್ಲಿ 83 ಮಂದಿಯ ಮೃತದೇಹ ಮತ್ತು 36 ಮಂದಿಯ ದೇಹದ ಭಾಗಗಳು ಸಿಕ್ಕಿದ್ದವು. ಇಂತಹ ದುರಂತಗಳು ಸಾಮಾನ್ಯ ಎಂಬಂತೆ ಇಲ್ಲಿ ಘಟಿಸುತ್ತಿವೆ.</p>.<p>ಈ ಪ್ರದೇಶದಲ್ಲಿ 15,000ಕ್ಕೂ ಹೆಚ್ಚು ಹಿಮಗಲ್ಲುಗಳಿವೆ. ಪ್ರತಿ ದಶಕದಲ್ಲಿ ಇವು 100ರಿಂದ 200 ಅಡಿಯಷ್ಟು ಕೆಳಕ್ಕೆ ಇಳಿಯುತ್ತಿವೆ. ಈ ಹಿಮಗಲ್ಲುಗಳು ಅತ್ಯಂತ ವೇಗವಾಗಿ ಕರಗುತ್ತಿವೆ. ಹೀಗೆ ಕರಗಿದ ಹಿಮಗಲ್ಲುಗಳು ದಿಢೀರ್ ಹಿಮಸರೋವರಗಳನ್ನು ಸೃಷ್ಟಿಸುತ್ತವೆ. ನೀರನ್ನು ಹಿಡಿದಿಟ್ಟುಕೊಳ್ಳಲಾಗದ ಮಣ್ಣು ಬಿರುಕು ಬಿಡುತ್ತದೆ ಮತ್ತು ದಿಢೀರ್ ಪ್ರವಾಹಗಳು ಉಂಟಾಗುತ್ತವೆ. 2021ರಲ್ಲಿ ಧೌಲಿಗಂಗಾ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ 70ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.</p>.<p>ಅಲಕನಂದಾ–ಭಾಗೀರಥಿ ನದಿಗೆ ಅಣೆಕಟ್ಟೆ ಕಟ್ಟಲೇಬಾರದು ಎಂದು ಪರಿಣತರ ಸಮಿತಿಯು ಶಿಫಾರಸು ಮಾಡಿತ್ತು. ಹಿಮಗಲ್ಲು ಪ್ರದೇಶದಲ್ಲಿ ಅಣೆಕಟ್ಟೆ ನಿರ್ಮಿಸಬೇಡಿ ಎಂದು ಸುಪ್ರೀಂ ಕೋರ್ಟ್ ಕೂಡ 2014ರಲ್ಲಿ ಹೇಳಿತ್ತು. ಆದರೆ ಸರ್ಕಾರವು ಈ ಸಲಹೆಯನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಅಣೆಕಟ್ಟೆ ನಿರ್ಮಾಣ ಮಾಡಲಾಯಿತು.</p>.<p>ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರೀನಾಥವನ್ನು ಸಂಪರ್ಕಿಸುವ 900 ಕಿ.ಮೀ. ಉದ್ದದ ಹೆದ್ದಾರಿ–ಚಾರ್ ಧಾಮ್ ಹೆದ್ದಾರಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ₹12,000 ಕೋಟಿ ವೆಚ್ಚದ ಯೋಜನೆ ಇದು. ನಿರ್ಮಾಣ ಕಾಮಗಾರಿಗಳನ್ನು ನಡೆಸಲೇಬಾರದು ಎಂದು ಪರಿಣತರು ಹಲವು ಬಾರಿ ಹೇಳಿದ್ದಾರೆ. ಆದರೆ, ಉತ್ತರಾಖಂಡದಲ್ಲಿ ಉಂಟಾದ ಪ್ರವಾಹಕ್ಕೆ ಈ ಯೋಜನೆ ಕಾರಣ ಅಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 2021ರಲ್ಲಿ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದರು.</p>.<p><strong>ಇವುಗಳನ್ನೂ ಓದಿ </strong></p>.<p><a href="https://www.prajavani.net/india-news/central-govt-forms-panel-to-study-gradual-sinking-of-land-in-joshimath-1003855.html" itemprop="url">ಕುಸಿಯುತ್ತಿರುವ ಜೋಶಿಮಠದ ಬಗ್ಗೆ ಕ್ಷಿಪ್ರ ಅಧ್ಯಯನ ನಡೆಸಲು ಸಮಿತಿ ರಚಿಸಿದ ಕೇಂದ್ರ </a></p>.<p><a href="https://www.prajavani.net/explainer/uttarakhand-joshimath-town-reporting-an-increase-in-landslides-and-hundreds-of-houses-at-the-hill-1003477.html" itemprop="url">ಆಳ–ಅಗಲ: ಹಿಮಾಲಯ ತಪ್ಪಲಿನ ಜೋಶಿಮಠ ಪಟ್ಟಣಕ್ಕೆ ಕುಸಿತದ ಭೀತಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>