‘ಪ್ರಧಾನಿ ಮೋದಿ ಅವರು ಬುಧವಾರ ಗುಜರಾತ್ ಮತ್ತು ನೆರೆಯ ಕೇಂದ್ರಾಡಳಿತ ಪ್ರದೇಶ ದಿಯುವಿನ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಈ ರೀತಿಯ ಸಮೀಕ್ಷೆಯನ್ನು ನಡೆಸಿಲ್ಲ. ಇದು ತಾರತಮ್ಯ ಅಲ್ಲವೇ?’ ಎಂದು ಎನ್ಸಿಪಿಯ ರಾಷ್ಟ್ರೀಯ ವಕ್ತಾರ ನವಾಬ್ ಮಲೀಕ್ ಅವರು ಟ್ವೀಟ್ ಮಾಡಿದ್ದಾರೆ.