ತಿರುವನಂತಪುರದಲ್ಲಿರುವ ಸಚಿವಾಲಯದ ಮುಂದೆ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಬೀಸಿದ್ದರಿಂದ ಪಕ್ಷದ ವಕ್ತಾರ ಬಿ. ಗೋಪಾಲಕೃಷ್ಣನ್ ಹಾಗೂ ಹಲವರು ಗಾಯಗೊಂಡಿದ್ದರು. ಕಾಂಗ್ರೆಸ್, ಬಿಜೆಪಿ ಹಾಗೂ ಯುವ ಮೋರ್ಚಾಗಳ ನೇತೃತ್ವದಲ್ಲಿ ಶನಿವಾರ ಪ್ರತಿ ಜಿಲ್ಲಾ ಕೇಂದ್ರದಲ್ಲೂ ಪ್ರತಿಭಟನೆ ನಡೆಸಲಾಗಿದೆ.