ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಅಧಿಕಾರಕ್ಕೆ ಬಂದರೆ 'ಲವ್ ಜಿಹಾದ್' ವಿರುದ್ಧ ಕಾನೂನು ಜಾರಿ: ಬಿಜೆಪಿ

Last Updated 28 ಫೆಬ್ರುವರಿ 2021, 8:01 IST
ಅಕ್ಷರ ಗಾತ್ರ

ಪಾಲಕ್ಕಾಡ್: ಕೇರಳದಲ್ಲಿ ಅಧಿಕಾರಕ್ಕೆ ಬಂದರೆ 'ಲವ್ ಜಿಹಾದ್' ವಿರುದ್ಧ ಕಾನೂನು ಜಾರಿ ಮಾಡಲಾಗುವುದು ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇರಳ ಘಟಕ ಅಧ್ಯಕ್ಷ ಕೆ. ಸುರೇಂದ್ರನ್ ಹೇಳಿಕೆ ನೀಡಿದ್ದಾರೆ.

ಕೇಂದ್ರ ಚುನಾವಣಾ ಆಯೋಗವು ಐದು ರಾಜ್ಯ/ಕೇಂದ್ರಡಾಳಿತ ಪ್ರದೇಶಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಕೇರಳದಲ್ಲಿ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್, ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನಿನ ಅಗತ್ಯವಿದೆ ಎಂದರು.

ಲವ್ ಜಿಹಾದ್ ಉತ್ತರ ಪ್ರದೇಶಕ್ಕಿಂತ ಕೇರಳದಲ್ಲಿ ವ್ಯಾಪಕವಾಗಿದೆ, ಅದನ್ನು ತಡೆಯಲು ಕಾನೂನಿನ ಅಗತ್ಯವಿದೆ. ರಾಜ್ಯದಲ್ಲಿ ಕ್ರೈಸ್ತ ಸಮುದಾಯವು ಆತಂಕಕ್ಕೊಳಗಾಗಿದ್ದು, ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮಕ್ಕೆ ಕೋರಿದೆ. ಇದು ಅವರಿಗೆ ತೀವ್ರ ಕಳಕಳಿಯ ಸಂಗತಿಯಾಗಿದೆ ಎಂದು ಹೇಳಿದರು.

ವಿವಾಹ ಹಾಗೂ ಮೋಸದ ಮೂಲಕ ಮತಾಂತರವನ್ನು ತಡೆಯಲು ಬಿಜೆಪಿ ಆಡಳಿತದ ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕಾನೂನನ್ನು ಜಾರಿಗೆ ತರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT