ಚೆನ್ನೈ: ಕರ್ನಾಟಕ ಮತ್ತು ಕೇರಳದೊಂದಿಗಿನ ಅಂತರರಾಜ್ಯ ನೀರು ಹಂಚಿಕೆ ವಿವಾದದ ಬಗ್ಗೆ ತಮಿಳುನಾಡು ಸರ್ಕಾರ ಮತ್ತೊಮ್ಮೆ ತನ್ನ ನಿಲುವನ್ನು ಪ್ರತಿಪಾದಿಸಿದೆ.
ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯನ್ನು ವಿರೋಧಿಸುವ ಮೂಲಕ ಹಾಗೂ ಕೇರಳದಲ್ಲಿರುವ ಮುಲ್ಲಪೆರಿಯಾರ್ ಅಣೆಕಟ್ಟಿನ 152 ಅಡಿಗಳ ಪೂರ್ಣ ಜಲಾಶಯದ ಮಟ್ಟವನ್ನು (ಎಫ್ಆರ್ಎಲ್) ಪುನಃಸ್ಥಾಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಮಿಳುನಾಡು ಸರ್ಕಾರ ತನ್ನ ನಿಲುವನ್ನು ವ್ಯಕ್ತಪಡಿಸಿದೆ.
ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಅವರುವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.