<p><strong>ಶಹಜಹಾನ್ಪುರ: </strong>ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವವರೆಗೂ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮುಂದುವರಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.</p>.<p>ರೈತರು ಕಷ್ಟ ಪಟ್ಟು ಬೆಳೆದ ಉತ್ಪನ್ನಗಳನ್ನು ಕೊಳ್ಳೆ ಹೊಡೆಯಲು ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟ್ಗಳ ನಡುವೆ ನಿಕಟ ಒಪ್ಪಂದವಾಗಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಈ ಕಪ್ಪು ಕಾನೂನುಗಳನ್ನು ಹಿಂಪಡೆಯುವವರೆಗೂ, ರೈತರು ದೆಹಲಿಯ ಗಡಿಗಳಲ್ಲೇ ಇರಲಿದ್ದಾರೆ ಎಂದು ಬಿಕೆಯುನ ರಾಷ್ಟ್ರೀಯ ವಕ್ತಾರರಾದ ಟಿಕಾಯತ್ ಹೇಳಿದ್ದಾರೆ. ರೈತರು ಈಗ ತಮ್ಮ ಹಕ್ಕುಗಳ ಬಗ್ಗೆ ತಿಳಿದಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p>ಸಂತ ಸುಖದೇವ್ ಸಿಂಗ್ ಅವರ 38ನೇ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಟಿಕಾಯತ್ ಮತ್ತು ಇತರ ರೈತ ಮುಖಂಡರು ಉತ್ತರ ಪ್ರದೇಶದ ಬುಂಡಾ ತಹಸಿಲ್ಗೆ ತೆರಳಿ ಗೌರವ ಸಲ್ಲಿಸಿದರು.</p>.<p>ರೈತರ ಚಳವಳಿಯನ್ನು ‘ಧರ್ಮ ಯುದ್ಧ’ಎಂದು ಕರೆದ ಬಿಕೆಯು (ಚಾನುನಿ ಬಣ) ರಾಷ್ಟ್ರೀಯ ಅಧ್ಯಕ್ಷ ಗುರ್ನಾಮ್ ಸಿಂಗ್, ಇದು ರೈತರ ಹಕ್ಕುಗಳನ್ನು ರಕ್ಷಿಸಲು ನಡೆಸುತ್ತಿರುವ ಹೋರಾಟ ಎಂದು ಪ್ರತಿಪಾದಿಸಿದ್ದಾರೆ.</p>.<p>ರೈತರನ್ನು ಗುಲಾಮರನ್ನಾಗಿ ಮಾಡುವುದು ಸರ್ಕಾರದ ಉದ್ದೇಶ, ಇದನ್ನು ಯಾವುದೇ ಸಂದರ್ಭದಲ್ಲೂ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಜಹಾನ್ಪುರ: </strong>ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವವರೆಗೂ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮುಂದುವರಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.</p>.<p>ರೈತರು ಕಷ್ಟ ಪಟ್ಟು ಬೆಳೆದ ಉತ್ಪನ್ನಗಳನ್ನು ಕೊಳ್ಳೆ ಹೊಡೆಯಲು ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟ್ಗಳ ನಡುವೆ ನಿಕಟ ಒಪ್ಪಂದವಾಗಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಈ ಕಪ್ಪು ಕಾನೂನುಗಳನ್ನು ಹಿಂಪಡೆಯುವವರೆಗೂ, ರೈತರು ದೆಹಲಿಯ ಗಡಿಗಳಲ್ಲೇ ಇರಲಿದ್ದಾರೆ ಎಂದು ಬಿಕೆಯುನ ರಾಷ್ಟ್ರೀಯ ವಕ್ತಾರರಾದ ಟಿಕಾಯತ್ ಹೇಳಿದ್ದಾರೆ. ರೈತರು ಈಗ ತಮ್ಮ ಹಕ್ಕುಗಳ ಬಗ್ಗೆ ತಿಳಿದಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p>ಸಂತ ಸುಖದೇವ್ ಸಿಂಗ್ ಅವರ 38ನೇ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಟಿಕಾಯತ್ ಮತ್ತು ಇತರ ರೈತ ಮುಖಂಡರು ಉತ್ತರ ಪ್ರದೇಶದ ಬುಂಡಾ ತಹಸಿಲ್ಗೆ ತೆರಳಿ ಗೌರವ ಸಲ್ಲಿಸಿದರು.</p>.<p>ರೈತರ ಚಳವಳಿಯನ್ನು ‘ಧರ್ಮ ಯುದ್ಧ’ಎಂದು ಕರೆದ ಬಿಕೆಯು (ಚಾನುನಿ ಬಣ) ರಾಷ್ಟ್ರೀಯ ಅಧ್ಯಕ್ಷ ಗುರ್ನಾಮ್ ಸಿಂಗ್, ಇದು ರೈತರ ಹಕ್ಕುಗಳನ್ನು ರಕ್ಷಿಸಲು ನಡೆಸುತ್ತಿರುವ ಹೋರಾಟ ಎಂದು ಪ್ರತಿಪಾದಿಸಿದ್ದಾರೆ.</p>.<p>ರೈತರನ್ನು ಗುಲಾಮರನ್ನಾಗಿ ಮಾಡುವುದು ಸರ್ಕಾರದ ಉದ್ದೇಶ, ಇದನ್ನು ಯಾವುದೇ ಸಂದರ್ಭದಲ್ಲೂ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>