ಈ ವೇಳೆ, ಕೋವಿಡ್–19 ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿದ ಸುಪ್ರೀಂಕೋರ್ಟ್, ಈ ಕ್ಲಿಷ್ಟ ಸಮಯದಲ್ಲಿ ಸಿಬಿಎಸ್ಇ ಮತ್ತು ಯುಜಿಸಿ ವಿದ್ಯಾರ್ಥಿಗಳಿಗೆ ನೆರವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮಂಡಳಿಯು ತಡಮಾಡದೇ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಬೇಕು ಮತ್ತು ಯುಜಿಸಿಯು ಈ ವಿದ್ಯಾರ್ಥಿಗಳ ಪದವಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿ ಅರ್ಜಿಯನ್ನು ವಿಲೇವಾರಿ ಮಾಡಿತು.