ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ʼಅಗತ್ಯವಾದರೆ, ದೆಹಲಿಯಲ್ಲಿ ಕಪ್ಪು ಶಿಲೀಂಧ್ರ ಪರಿಸ್ಥಿತಿಯನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗುವುದು. ವೈದ್ಯರು ಸ್ಟಿರಾಯ್ಡ್ ಅನ್ನು ನಿಯಂತ್ರಿತ ರೀತಿಯಲ್ಲಿ ಬಳಸಬೇಕು. ರೋಗಿಗಳು ತಮ್ಮ ರಕ್ತದಲ್ಲಿ ಸಕ್ಕರೆ ಅಂಶವನ್ನು ಕಾಪಾಡಿಕೊಳ್ಳುವುದು ಅಗತ್ಯ. ಸ್ಟಿರಾಯ್ಡ್ ಮತ್ತು ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಳವೇ ಕಪ್ಪು ಶಿಲೀಂಧ್ರ ಸೋಂಕಿಗೆ ಕಾರಣʼ ಎಂದು ತಿಳಿಸಿದ್ದಾರೆ.