ಇಲ್ಲಿನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಟ ರಜನಿಕಾಂತ್, ‘ರಜನಿ ಮಕ್ಕಳ್ ಮಂದಿರಂ’ನ ಜಿಲ್ಲಾ ಕಾರ್ಯದರ್ಶಿಗಳು ಮತ್ತು ಇತರ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ತಮ್ಮ ಅಭಿಪ್ರಾಯವನ್ನು ತಿಳಿಸಿದರು. ಪದಾಧಿಕಾರಿಗಳೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಆದರೆ, ರಾಜಕೀಯ ಸೇರುವ ಕುರಿತು ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಲಿಲ್ಲ.