ಈ ಬಗ್ಗೆ ಪ್ರಶ್ನಿಸಿದಾಗ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶಕೀಲ್ ಅಹ್ಮದ್ ಖಾನ್ ಅವರು, ‘ಇದನ್ನು ನಾನು ದೃಢಪಡಿಸಲು ಸಾಧ್ಯವಿಲ್ಲ. ಪಕ್ಷದ ಉನ್ನತ ನಾಯಕರಷ್ಟೇ ಆ ಬಗ್ಗೆ ಹೇಳಬೇಕು’ ಎಂದು ಹೇಳಿದ್ದಾರೆ. ಈ ಮಾತುಕತೆ ನಡೆದಿದೆ ಎಂಬ ಸುದ್ದಿಯ ಬಗ್ಗೆ ಜೆಡಿಯು ಸಹ ಯಾವುದೇ ಮಾಹಿತಿ ನೀಡಿಲ್ಲ. ಜೆಡಿಯು ನಾಯಕರು, ‘ನಮಗೇನೂ ತಿಳಿದಿಲ್ಲ’ ಎಂದಷ್ಟೇ ಹೇಳಿದ್ದಾರೆ.