ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಗೇನಕಲ್‌ ಜಲಯೋಜನೆ: ಡಿಎಂಕೆ ನೇತೃತ್ವದ ಸರ್ಕಾರಕ್ಕೆ ಎಐಎಡಿಎಂಕೆ ಬೆಂಬಲ

Last Updated 23 ಜನವರಿ 2022, 16:31 IST
ಅಕ್ಷರ ಗಾತ್ರ

ಚೆನ್ನೈ: ಹೊಗೇನಕಲ್‌ ಜಲ ಯೋಜನೆಯ ಎರಡನೇ ಹಂತದ ಕಾಮಗಾರಿ ಕುರಿತಂತೆ ಡಿಎಂಕೆ ನೇತೃತ್ವದ ಸರ್ಕಾರವನ್ನು ಬೆಂಬಲಿಸಲಾಗುವುದು ಎಂದು ಎಐಎಡಿಎಂಕೆ ಭಾನುವಾರ ಹೇಳಿದೆ.

ಇದೇ ವೇಳೆ ಯೋಜನೆಗೆ ಆಕ್ಷೇಪ ಎತ್ತಿರುವ ಕರ್ನಾಟಕ ಸರ್ಕಾರದ ನಿಲುವನ್ನು ಖಂಡಿಸಿದೆ. ಧರ್ಮಪುರಿ ಮತ್ತು ಕೃಷ್ಣಗಿರಿ ಜಿಲ್ಲೆಗಳ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವುದು ಇದರ ಗುರಿ ಎಂದು ತಮಿಳುನಾಡು ಸರ್ಕಾರ ಹೇಳಿಕೊಂಡಿದೆ.

ಈ ಕುರಿತ ಹೇಳಿಕೆಯಲ್ಲಿ ಎಐಎಡಿಎಂಕೆ ಸಂಯೋಜಕ ಒ.ಪನ್ನೀರ್‌ಸೆಲ್ವಂ ಅವರು, ‘ಕರ್ನಾಟಕ ಸರ್ಕಾರ ಸಕಾಲದಲ್ಲಿ ಕಾವೇರಿ ನೀರು ಹರಿಸುತ್ತಿಲ್ಲ. ಕೇವಲ ಹೆಚ್ಚುವರಿ ನೀರಷ್ಟೇ ಹರಿದುಬರುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT