<p><strong>ನವದೆಹಲಿ:</strong> ‘ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ‘ಭಗವಂತನ ಆಟ’. ಇದು ಅನಿರೀಕ್ಷಿತ ನಷ್ಟವನ್ನುಂಟು ಮಾಡಿದ್ದು, ಪ್ರಸಕ್ತ ಆರ್ಥಿಕತೆ ಮೇಲೆ ಅಪಾರ ಪರಿಣಾಮ ಬೀರಿದೆ' ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಯನ್ನು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಟೀಕಿಸಿದ್ದಾರೆ.</p>.<p>’ಕೊರೊನಾ ವೈರಸ್ ಸಾಂಕ್ರಾಮಿಕ ಹಬ್ಬುವ ಮುನ್ನವೇ ಆರ್ಥಿಕತೆ ಹದಗೆಟ್ಟಿದ್ದ ಬಗ್ಗೆ ಹಣಕಾಸು ಸಚಿವರು ಉತ್ತರ ನೀಡುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘2017–18, 2018–19 ಮತ್ತು 2019–20ರ ಹಣಕಾಸು ವರ್ಷಗಳಲ್ಲಿನ ಆರ್ಥಿಕ ಪರಿಸ್ಥಿತಿಯನ್ನು ಅಸಮರ್ಪಕವಾಗಿ ನಿರ್ವಹಿಸಲಾಗಿತ್ತು. ದೇವರ ಸಂದೇಶ ದೂತರಾಗಿರುವ ಹಣಕಾಸು ಸಚಿವರು ಈ ಬಗ್ಗೆ ಉತ್ತರ ನೀಡುತ್ತಾರೆಯೇ’ ಎಂದು ಕೇಳಿದ್ದಾರೆ.</p>.<p>‘ಜಿಎಸ್ಟಿ ವಿಷಯದಲ್ಲೂ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ರಾಜ್ಯ ಸರ್ಕಾರಗಳಿಗೆ ದೊರೆಯಬೇಕಾದ ಪಾಲು ನೀಡುತ್ತಿಲ್ಲ’ ಎಂದು ಚಿದಂಬರಂ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ‘ಭಗವಂತನ ಆಟ’. ಇದು ಅನಿರೀಕ್ಷಿತ ನಷ್ಟವನ್ನುಂಟು ಮಾಡಿದ್ದು, ಪ್ರಸಕ್ತ ಆರ್ಥಿಕತೆ ಮೇಲೆ ಅಪಾರ ಪರಿಣಾಮ ಬೀರಿದೆ' ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಯನ್ನು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಟೀಕಿಸಿದ್ದಾರೆ.</p>.<p>’ಕೊರೊನಾ ವೈರಸ್ ಸಾಂಕ್ರಾಮಿಕ ಹಬ್ಬುವ ಮುನ್ನವೇ ಆರ್ಥಿಕತೆ ಹದಗೆಟ್ಟಿದ್ದ ಬಗ್ಗೆ ಹಣಕಾಸು ಸಚಿವರು ಉತ್ತರ ನೀಡುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘2017–18, 2018–19 ಮತ್ತು 2019–20ರ ಹಣಕಾಸು ವರ್ಷಗಳಲ್ಲಿನ ಆರ್ಥಿಕ ಪರಿಸ್ಥಿತಿಯನ್ನು ಅಸಮರ್ಪಕವಾಗಿ ನಿರ್ವಹಿಸಲಾಗಿತ್ತು. ದೇವರ ಸಂದೇಶ ದೂತರಾಗಿರುವ ಹಣಕಾಸು ಸಚಿವರು ಈ ಬಗ್ಗೆ ಉತ್ತರ ನೀಡುತ್ತಾರೆಯೇ’ ಎಂದು ಕೇಳಿದ್ದಾರೆ.</p>.<p>‘ಜಿಎಸ್ಟಿ ವಿಷಯದಲ್ಲೂ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ರಾಜ್ಯ ಸರ್ಕಾರಗಳಿಗೆ ದೊರೆಯಬೇಕಾದ ಪಾಲು ನೀಡುತ್ತಿಲ್ಲ’ ಎಂದು ಚಿದಂಬರಂ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>