<p><strong>ಚಂಡೀಗಡ</strong>: ಬಿಜೆಪಿ ಮತ್ತು ಅಕಾಲಿ ಬಣದ ಜೊತೆ ಸೇರಿ ಪಂಜಾಬ್ನಲ್ಲಿ ಮುಂದಿನ ಸರ್ಕಾರ ರಚಿಸಲಾಗುವುದು ಎಂದು ‘ಪಂಜಾಬ್ ಲೋಕ್ ಕಾಂಗ್ರೆಸ್’ ಪಕ್ಷದ ಸಂಸ್ಥಾಪಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಹೇಳಿದ್ದಾರೆ.</p>.<p>ಹರಿಯಾಣ ಮುಖ್ಯಮಂತ್ರಿ ಮನೋಹರ್ಲಾಲ್ ಖಟ್ಟರ್ ಅವರನ್ನು ಭೇಟಿಯಾದ ಬಳಿಕ ಅವರು ಈ ವಿಷಯ ತಿಳಿಸಿದರು.</p>.<p>‘ಭೇಟಿಗೆ ಯಾವುದೇ ರಾಜಕೀಯ ಮಹತ್ವ ಇಲ್ಲ, ಖಟ್ಟರ್ ಅವರೊಂದಿಗೆ ಒಂದು ಕಪ್ ಕಾಫಿ ಕುಡಿದಿದ್ದೇನೆ’ ಎಂದು ಅಮರಿಂದರ್ ಪ್ರತಿಕ್ರಿಯಿಸಿದರು.</p>.<p>ವಿಧಾನಸಭಾ ಚುನಾವಣೆಗೆ ಮೊದಲು ‘ಪಂಜಾಬ್ ಲೋಕ್ ಕಾಂಗ್ರೆಸ್’ಗೆ ಪ್ರಮುಖರು ಸೇರ್ಪಡೆಗೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಸ್ವಲ್ಪ ಕಾಯಿರಿ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಪಕ್ಷದ ಸದಸ್ಯತ್ವ ಅಭಿಯಾನವು ಉತ್ತಮ ರೀತಿಯಲ್ಲಿ ಮುಂದುವರಿಯುತ್ತಿದೆ’ ಎಂದರು.</p>.<p>‘ಬಿಜೆಪಿ ಹಾಗೂ ಸುಖದೇವ್ ಸಿಂಗ್ ಧಿಂಡ್ಸಾ ಅವರ ಪಕ್ಷದ (ಎಸ್ಎಡಿ ಸಂಯುಕ್ತ) ಜೊತೆ ಚುನಾವಣೆಯಲ್ಲಿ ಸ್ಥಾನ ಹಂಚಿಕೆ ಮಾಡಿಕೊಳ್ಳಲಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ</strong>: ಬಿಜೆಪಿ ಮತ್ತು ಅಕಾಲಿ ಬಣದ ಜೊತೆ ಸೇರಿ ಪಂಜಾಬ್ನಲ್ಲಿ ಮುಂದಿನ ಸರ್ಕಾರ ರಚಿಸಲಾಗುವುದು ಎಂದು ‘ಪಂಜಾಬ್ ಲೋಕ್ ಕಾಂಗ್ರೆಸ್’ ಪಕ್ಷದ ಸಂಸ್ಥಾಪಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಹೇಳಿದ್ದಾರೆ.</p>.<p>ಹರಿಯಾಣ ಮುಖ್ಯಮಂತ್ರಿ ಮನೋಹರ್ಲಾಲ್ ಖಟ್ಟರ್ ಅವರನ್ನು ಭೇಟಿಯಾದ ಬಳಿಕ ಅವರು ಈ ವಿಷಯ ತಿಳಿಸಿದರು.</p>.<p>‘ಭೇಟಿಗೆ ಯಾವುದೇ ರಾಜಕೀಯ ಮಹತ್ವ ಇಲ್ಲ, ಖಟ್ಟರ್ ಅವರೊಂದಿಗೆ ಒಂದು ಕಪ್ ಕಾಫಿ ಕುಡಿದಿದ್ದೇನೆ’ ಎಂದು ಅಮರಿಂದರ್ ಪ್ರತಿಕ್ರಿಯಿಸಿದರು.</p>.<p>ವಿಧಾನಸಭಾ ಚುನಾವಣೆಗೆ ಮೊದಲು ‘ಪಂಜಾಬ್ ಲೋಕ್ ಕಾಂಗ್ರೆಸ್’ಗೆ ಪ್ರಮುಖರು ಸೇರ್ಪಡೆಗೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಸ್ವಲ್ಪ ಕಾಯಿರಿ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಪಕ್ಷದ ಸದಸ್ಯತ್ವ ಅಭಿಯಾನವು ಉತ್ತಮ ರೀತಿಯಲ್ಲಿ ಮುಂದುವರಿಯುತ್ತಿದೆ’ ಎಂದರು.</p>.<p>‘ಬಿಜೆಪಿ ಹಾಗೂ ಸುಖದೇವ್ ಸಿಂಗ್ ಧಿಂಡ್ಸಾ ಅವರ ಪಕ್ಷದ (ಎಸ್ಎಡಿ ಸಂಯುಕ್ತ) ಜೊತೆ ಚುನಾವಣೆಯಲ್ಲಿ ಸ್ಥಾನ ಹಂಚಿಕೆ ಮಾಡಿಕೊಳ್ಳಲಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>