ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್)ಹೆಸರನ್ನು ಹೇಳದೇ ವಾಗ್ದಾಳಿ ನಡೆಸಿದ ಅವರು, ‘ಚಡ್ಡಿ ಹಾಕಿಕೊಂಡು ಓಡಾಡುವವರು ತಮ್ಮ ಕೇಂದ್ರ ಕಚೇರಿಯಲ್ಲೇ ತ್ರಿವರ್ಣ ಧ್ವಜವನ್ನು ಹಾರಿಸುವುದಿಲ್ಲ. ಇವರು ರಾಷ್ಟ್ರಧ್ವಜದ ಬಗ್ಗೆ ನಮಗೆ ಪಾಠ ಮಾಡುತ್ತಾರೆ. ವಿಶೇಷಾಧಿಕಾರ ರದ್ದುಗೊಳಿಸುವುದರ ಮೂಲಕ ಹಾಗೂ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಬೇರ್ಪಡಿಸುವಮುಖಾಂತರ ದೇಶದೊಂದಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ಸಂಬಂಧವನ್ನು ಬಿಜೆಪಿ ಒಡೆದಿದೆ’ ಎಂದು ಅವರು ಆರೋಪಿಸಿದರು.