ಉತ್ತರ ಪ್ರದೇಶದಲ್ಲಿ ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯೊಬ್ಬರಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ‘ಇದು ಸಂಘಪರಿವಾರದವರು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಿ, ಅಲ್ಪಸಂಖ್ಯಾತರನ್ನು ಮಟ್ಟ ಹಾಕಲು ಮಾಡಿದ ಕೆಟ್ಟ ಪ್ರಚಾರದ ಪರಿಣಾಮ‘ ಎಂದು ಪ್ರತಿಕ್ರಿಯಿಸಿದ್ದರು. ಇದಾದ ಒಂದು ದಿನದ ನಂತರ, ಅವರು ಈ ಟ್ವೀಟ್ ಮಾಡಿದ್ದಾರೆ.