ನವದೆಹಲಿ: ಸಂಸತ್ ಅಧಿವೇಶನದಲ್ಲಿ ಮೌಲ್ಯಯುತ ಚರ್ಚೆಗೆ ಆದ್ಯತೆ ಕೊಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ಪ್ರಧಾನಿ ಎಂದಾದರೂ ಸಂಸತ್ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ ಎಂದು ತಿರುಗೇಟು ನೀಡಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಗುಣಮಟ್ಟದ ಚರ್ಚೆಗೆ ಪ್ರತ್ಯೇಕ ಸಮಯವನ್ನು ಕಲ್ಪಿಸುವ ಮಹತ್ವದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದರು.
Interesting to read that PM stressed the need for ‘quality debates’ in Parliament
He also suggested setting a separate time for quality debates
The question is ‘Will PM ever participate in a debate in Parliament?
'ಸಂಸತ್ತಿನಲ್ಲಿ ಗುಣಮಟ್ಟದ ಚರ್ಚೆಗಳ ಅಗತ್ಯವಿದೆ ಎಂದು ಪ್ರಧಾನಿ ಒತ್ತಿ ಹೇಳಿರುವುದು ಆಸಕ್ತಿದಾಯಕವಾಗಿದೆ. ಗುಣಮಟ್ಟದ ಚರ್ಚೆಗಳಿಗಾಗಿ ಪ್ರತ್ಯೇಕ ಸಮಯವನ್ನು ನಿಗದಿ ಮಾಡುವಂತೆಯೂ ಸಲಹೆ ಮಾಡಿದ್ದಾರೆ. ಆದರೆ ಈಗ ಉದ್ಭವಿಸಿರುವ ಪ್ರಶ್ನೆ ಏನೆಂದರೆ ಸಂಸತ್ತಿನಲ್ಲಿ ಪ್ರಧಾನಿ ಎಂದಾದರೂ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ' ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಚರ್ಚೆಯಿಂದ ಸರ್ಕಾರ ಪಾಲಾಯನ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅತ್ತ ವಿರೋಧ ಪಕ್ಷಗಳು ಸದನದ ಕಾರ್ಯಕಲಾಪಕ್ಕೆ ಅಡ್ಡಿಯಾಗುತ್ತಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿದೆ.