ಶಿವಪಾಲ್ ಅವರು ಮುಖ್ಯಮಂತ್ರಿ ಆದಿತ್ಯನಾಥ ಅವರನ್ನು ಬುಧವಾರ ಭೇಟಿ ಮಾಡಿ ಅರ್ಧತಾಸು ಚರ್ಚಿಸಿರುವುದು ಈ ಊಹಾಪೋಹಕ್ಕೆ ಕಾರಣ. ವಿಧಾನಸಭೆಯಲ್ಲಿ ಎಸ್ಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅಖಿಲೇಶ್ ಅವರನ್ನು ಆಯ್ಕೆ ಮಾಡಲಾದ ಸಭೆಗೆ ಶಿವಪಾಲ್ ಅವರಿಗೆ ಆಹ್ವಾನವಿರಲಿಲ್ಲ. ಈ ಬಗ್ಗೆ ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಅವರಿಗೆ ದೂರು ನೀಡಿದ್ದ ಶಿವಪಾಲ್, ದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂ
ಡರನ್ನು ಭೇಟಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.