ಉಜ್ಜಯಿನಿ,ಮಧ್ಯಪ್ರದೇಶ: ‘ರಾಮಾಯಣ ಎಕ್ಸ್ಪ್ರೆಸ್’ ರೈಲಿನ ಪರಿಚಾರಕರ ಕಾವಿ ಬಣ್ಣದ ಸಮವಸ್ತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಉಜ್ಜಯಿನಿಯ ಸಂತರು, ಸಮವಸ್ತ್ರವನ್ನು ಹಿಂಪಡೆಯದಿದ್ದರೆ ಡಿಸೆಂಬರ್ 12ರಂದು ದೆಹಲಿಯಲ್ಲಿ ರೈಲು ತಡೆ ನಡೆಸಲಾಗುವುದು ಎಂದು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಕೇಸರಿ ಬಣ್ಣದ ಸಮವಸ್ತ್ರ ಧರಿಸುವ ಮೂಲಕ ಹಿಂದೂ ಧರ್ಮಕ್ಕೆ ಅವಹೇಳನ ಮಾಡಲಾಗಿದೆ ಎಂದೂ ಆರೋಪಿಸಿದ್ದಾರೆ.
‘ರೈಲಿನ ಸಿಬ್ಬಂದಿ ಕೇಸರಿ ಸಮವಸ್ತ್ರ ಧರಿಸಿ ಆಹಾರ ಪೂರೈಸುತ್ತಿರುವ ಬಗ್ಗೆ ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದೇವೆ. ಪರಿಚಾರಕರು, ಸಾಧುಗಳು ಧರಿಸುವಂತಹ ಕೇಸರಿ ಬಣ್ಣದ ಬಟ್ಟೆ ಹಾಗೂ ರುದ್ರಾಕ್ಷಿ ಮಾಲೆಯನ್ನು ಧರಿಸುವ ಮೂಲಕ ಸಾಧುಗಳಿಗೆ ಅವಮಾನ ಮಾಡಿದ್ದಾರೆ’ ಎಂದು ಉಜ್ಜಯಿನಿಯ ಅಖಾಡ ಪರಿಷತ್ನ ಮಾಜಿ ಪ್ರಧಾನ ಕಾರ್ಯದರ್ಶಿ ಅವದೇಶ್ಪುರಿ ತಿಳಿಸಿದ್ದಾರೆ.